ತುಮಕೂರು: ನಾನು ಕೂಡ ಸ್ವಾಭಿಮಾನಿ, ಹಾಗಂತ ನಮ್ಮ ನಾಯಕರು ನನ್ನನ್ನು ಕರೆದು ರೈತ ಮಹಿಳೆಯ ವಿಚಾರವಾಗಿ ರಾಜೀನಾಮೆ ಕೇಳಿದ್ರೆ ಒಂದು ಕ್ಷಣವೂ ಸುಮ್ಮನಿರೋದಿಲ್ಲ. ಇನ್ನು ಈ ಘಟನೆಯಿಂದ ಹೆಣ್ಣು ಮಕ್ಕಳ ಮನಸ್ಸಿಗೆ ನೋವಾಗಿದ್ರೆ ನಾನು ಅಪಾಲಜಿ ಕೇಳುತ್ತೇನೆ ಎಂದು ಸಚಿವ ಮಧುಸ್ವಾಮಿ ಹೇಳಿದರು.
ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು
ನಾವು ಆ ಭಾಗಕ್ಕೆ ನೀರು ಸಿಕ್ತಿಲ್ಲ ಎಂಬ ಕಾರಣಕ್ಕೆ ಅಲ್ಲಿಗೆ ಹೋಗಿದ್ವಿ, ಚಿಂತಾಮಣಿಯಲ್ಲಿ ಕೆರೆಗೆ ನೀರು ಬಿಡುವ ವಿಚಾರಕ್ಕೆ ಪರಿಶೀಲನೆಗಾಗಿ ತೆರಳಿದ್ವಿ. ಅಲ್ಲಿಗೆ ಒಂದಷ್ಟು ಜನ ಬಂದು ಸೇರಿದರು. ಅವರು ರೈತಸಂಘದವರೆಂದು ನಮಗೆ ಗೊತ್ತಿರಲಿಲ್ಲ. ಅಲ್ಲಿದ್ದ ಈ ಮಹಿಳೆ 130 ಎಕರೆ ಒತ್ತುವರಿಯಾಗಿದೆ ಎಂದು ಮಾತನಾಡಿದರು. ಆಗ ನಾನು ಸೆಕ್ರೆಟಯವರಿಗೆ ಇದಕ್ಕೆ ನಿಮ್ಮ ಉತ್ತರ ಹೇಳಿ ಎಂದು ಕೇಳಿದೆ. ಆಗ ಮಹಿಳೆ ನನಗೇ ಜೋರಾಗಿ ಮಾತನಾಡಿದರು. ಆಗ ನಾನು, ಏನಮ್ಮ ಈ ಪ್ರಶ್ನೆ ನನ್ನ ಕೇಳ್ತಿಯ ಅಂತ ಕೇಳ್ದೆ. ಮತ್ತೆ ಏನ್ರಿ ಮಾಡ್ತಿದ್ದೀರಿ? ಅಂತ ನನ್ನನ್ನೇ ಕೇಳಿದ್ರು. ನನಗೂ ಸ್ವಾಭಿಮಾನವಿದೆ. ನೋಡಮ್ಮ ನಾನು ಕೆಟ್ಟವನು, ನೀನು ಸ್ವಲ್ಪ ರಿಕ್ವೆಸ್ಟ್ ಮಾಡಿಕೊಬೇಕು. ಈ ರೀತಿ ಆದೇಶ ಕೊಡಲಿ ಅಂತ ನಾನು ಬಂದಿಲ್ಲ. ಅಂತ ಸಿಟ್ಟಿನಲ್ಲಿ ಮುಚ್ಚಮ್ಮ ಬಾಯಿ ರಾಸ್ಕಲ್ ಅಂತ ಹೇಳಿದೆ ಎಂದರು.
ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ ನಾನೇಕೆ ರಾಜೀನಾಮೆ ನೀಡಬೇಕು? ನನ್ನನ್ನು ತಬ್ಬಿಕೊಂಡು ಯಾವ ಮಹಿಳೆಯೂ ಮುತ್ತುಕೊಟ್ಟಿಲ್ಲ! ಎಂದು ವ್ಯಂಗ್ಯವಾಡಿದರು.

Leave a Reply

Your email address will not be published. Required fields are marked *

You May Also Like

ಲಡಾಖ್‍ನಲ್ಲಿ ಪ್ರಧಾನಿ ಮೋದಿ ತೆರೆಯಿತೆ ಲಡಾಯಿಯ ಹಾದಿ?

ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ -1.25. ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ…

ಕೆಜಿ “ಬಂಡಿ”ಗೆ ನಾನು ತಮಾಷೆ ಮಾಡಿದ್ದೆ: ಬಿ ಎಸ್ ವೈ ಸ್ಪಷ್ಟನೆ

ಉತ್ತರಪ್ರಭ ಸುದ್ದಿನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ…

ದೇವಸ್ಥಾನ ಆರಂಭದ ಬಗ್ಗೆ ಮುಜರಾಯಿ ಸಚಿವರು ಹೇಳಿದ್ದೇನು..?

ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.