ಕೊಪ್ಪಳದಲ್ಲಿ ವಿವಿಧೆಡೆ 13 ಬಾಲ್ಯವಿವಾಹಕ್ಕೆ ತಡೆ

ಕೊಪ್ಪಳ: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮೇಲ್ವಿಚಾರಕರು, ಶಾಲಾ ಮುಖ್ಯೋಪಾಧ್ಯಾಯರು, ಪೊಲೀಸ್ ಇಲಾಖೆಯ ಸಿಬ್ಬಂದಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡವು ಜಿಲ್ಲೆಯ ಆಯಾ ತಾಲೂಕಿನ ಗ್ರಾಮಗಳಲ್ಲಿ ಒಟ್ಟು 13 ಬಾಲ್ಯ ವಿವಾಹಗಳನ್ನು ತಡೆಗಟ್ಟಿದ್ದಾರೆ.
ಕೋವಿಡ್-19 ಪ್ರಯುಕ್ತ ಲಾಕ್‌ಡೌನ್ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯ ವಿವಿಧೆಡೆ ನಡೆಯುತ್ತಿದ್ದ ಬಾಲ್ಯ ವಿವಾಹಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತಡೆಗಟ್ಟಲಾಗಿದೆ.
ಏಪ್ರಿಲ್ 14 ರಂದು ಕುಷ್ಟಗಿ ತಾಲೂಕಿನ ಹನುಮಸಾಗರ, ಏ.15 ರಂದು ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ, ಏ.24 ರಂದು ಗಂಗಾವತಿಯ ತಾಲೂಕಿನ ಮುಸ್ಟೂರು ಗ್ರಾಮದಲ್ಲಿ, ಏ.25 ರಂದು ವಿರುಪಾಪೂರ ಗ್ರಾಮದಲ್ಲಿ, ಏ.26 ರಂದು ಕುಷ್ಟಗಿ ತಾಲೂಕಿನ ಮುದ್ದಲಗುಂದಿ ಗ್ರಾಮದಲ್ಲಿ, ಏ.28 ರಂದು ಗಂಗಾವತಿಯ ಹಿರೇಜಂತಕಲ್ ಗ್ರಾಮದಲ್ಲಿ, ಮೇ 02 ರಂದು ಗಂಗಾವತಿಯ ಹಣವಾಳ ಗ್ರಾಮದಲ್ಲಿ, ಮೇ.11 ರಂದು ಗಂಗಾವತಿಯ ಹೊಸ ಅಯೋಧ್ಯ ಮತ್ತು ಶ್ರೀರಾಮ ನಗರ ಗ್ರಾಮದಲ್ಲಿ, ಮೇ.12 ರಂದು ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದಲ್ಲಿ ಮತ್ತು ಮೇ 14 ರಂದು ಅಳವಂಡಿ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಬಾಲ್ಯವಿವಾಹಗಳನ್ನು ತಡೆದಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಂದರ್ ಬಾಹರ್: ಪೋಲಿಸರ್ ಕಾರ್ಯಾಚರಣೆ : 14 ಲಕ್ಷ ರೂ. ಜಪ್ತಿ, 17 ಜನರ ಮೇಲೆ ಪ್ರಕರಣ ದಾಖಲು, ಸರ್ಕಾರಿ ನೌಕರ ಭಾಗಿ

ಉತ್ತರಪ್ರಭ ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ…

ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್

ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ…

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .

ಬೆಳಧಡಿ: ಪ್ರಧಾನ ಮಂತ್ರಿ ಜೀವನಜ್ಯೋತಿ ಚೆಕ್ ವಿತರಣೆ

ಮುಳಗುಂದ: ಸಮೀಪದ ಬೆಳಧಡಿ ಗ್ರಾಮದ ಅಂಚೆ ಕಚೇರಿಯಲ್ಲಿ ಮಂಗಳವಾರ ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ಸಂಗಮೇಶ ಅರಕೇರಿಮಠ ಅವರಿಗೆ 2 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು.