ಕೊಪ್ಪಳದಲ್ಲಿ ವಿವಿಧೆಡೆ 13 ಬಾಲ್ಯವಿವಾಹಕ್ಕೆ ತಡೆ

ಕೊಪ್ಪಳ: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮೇಲ್ವಿಚಾರಕರು, ಶಾಲಾ ಮುಖ್ಯೋಪಾಧ್ಯಾಯರು, ಪೊಲೀಸ್ ಇಲಾಖೆಯ ಸಿಬ್ಬಂದಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡವು ಜಿಲ್ಲೆಯ ಆಯಾ ತಾಲೂಕಿನ ಗ್ರಾಮಗಳಲ್ಲಿ ಒಟ್ಟು 13 ಬಾಲ್ಯ ವಿವಾಹಗಳನ್ನು ತಡೆಗಟ್ಟಿದ್ದಾರೆ.
ಕೋವಿಡ್-19 ಪ್ರಯುಕ್ತ ಲಾಕ್‌ಡೌನ್ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯ ವಿವಿಧೆಡೆ ನಡೆಯುತ್ತಿದ್ದ ಬಾಲ್ಯ ವಿವಾಹಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತಡೆಗಟ್ಟಲಾಗಿದೆ.
ಏಪ್ರಿಲ್ 14 ರಂದು ಕುಷ್ಟಗಿ ತಾಲೂಕಿನ ಹನುಮಸಾಗರ, ಏ.15 ರಂದು ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ, ಏ.24 ರಂದು ಗಂಗಾವತಿಯ ತಾಲೂಕಿನ ಮುಸ್ಟೂರು ಗ್ರಾಮದಲ್ಲಿ, ಏ.25 ರಂದು ವಿರುಪಾಪೂರ ಗ್ರಾಮದಲ್ಲಿ, ಏ.26 ರಂದು ಕುಷ್ಟಗಿ ತಾಲೂಕಿನ ಮುದ್ದಲಗುಂದಿ ಗ್ರಾಮದಲ್ಲಿ, ಏ.28 ರಂದು ಗಂಗಾವತಿಯ ಹಿರೇಜಂತಕಲ್ ಗ್ರಾಮದಲ್ಲಿ, ಮೇ 02 ರಂದು ಗಂಗಾವತಿಯ ಹಣವಾಳ ಗ್ರಾಮದಲ್ಲಿ, ಮೇ.11 ರಂದು ಗಂಗಾವತಿಯ ಹೊಸ ಅಯೋಧ್ಯ ಮತ್ತು ಶ್ರೀರಾಮ ನಗರ ಗ್ರಾಮದಲ್ಲಿ, ಮೇ.12 ರಂದು ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದಲ್ಲಿ ಮತ್ತು ಮೇ 14 ರಂದು ಅಳವಂಡಿ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಬಾಲ್ಯವಿವಾಹಗಳನ್ನು ತಡೆದಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿನ ಎಲ್ಲ ರೈತರಿಗೂ 5 ಸಾವಿರ ಪರಿಹಾರ ಘೋಷಣೆ!

ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಎಲ್ಲ ರೈತರಿಗೆ ರೂ.5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ದಿಗ್ವಿಜಯ್ ಸಿಂಗ್ ನಕಲಿ ಟ್ವೀಟರ್ ರಚನೆ: ದೂರು ನೀಡಿದ ಕೈ ನಾಯಕ

ಭೋಪಾಲ್: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಹೆಸರಿನಲ್ಲಿ ನಕಲಿ ಟ್ವೀಟರ್…

ಊರಳಿಯನಿಂದ ಬಂತು ಸೋಂಕು: ಆರ್.ಎಂ.ಪಿ ಡಾಕ್ಟರ್ ನಿಂದ ಸುತ್ತಲಿನ ಗ್ರಾಮಸ್ಥರಿಗೆ ಆತಂಕ..!

ಗದಗ: ಊರಳಿಯ ಮಾವನ ಮನೆಗೆ ಬಂದಿದ್ದಾನೆ. ಆದರೆ ಆತನಿಗೆ ಸೋಂಕು ತಗುಲಿರುವುದು ಸ್ವತ: ಆತನಿಗೂ ಗೊತ್ತಿರಲಿಲ್ಲ.…

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.