ಕೊಪ್ಪಳದಲ್ಲಿ ವಿವಿಧೆಡೆ 13 ಬಾಲ್ಯವಿವಾಹಕ್ಕೆ ತಡೆ

ಕೊಪ್ಪಳ: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮೇಲ್ವಿಚಾರಕರು, ಶಾಲಾ ಮುಖ್ಯೋಪಾಧ್ಯಾಯರು, ಪೊಲೀಸ್ ಇಲಾಖೆಯ ಸಿಬ್ಬಂದಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡವು ಜಿಲ್ಲೆಯ ಆಯಾ ತಾಲೂಕಿನ ಗ್ರಾಮಗಳಲ್ಲಿ ಒಟ್ಟು 13 ಬಾಲ್ಯ ವಿವಾಹಗಳನ್ನು ತಡೆಗಟ್ಟಿದ್ದಾರೆ.
ಕೋವಿಡ್-19 ಪ್ರಯುಕ್ತ ಲಾಕ್‌ಡೌನ್ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯ ವಿವಿಧೆಡೆ ನಡೆಯುತ್ತಿದ್ದ ಬಾಲ್ಯ ವಿವಾಹಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತಡೆಗಟ್ಟಲಾಗಿದೆ.
ಏಪ್ರಿಲ್ 14 ರಂದು ಕುಷ್ಟಗಿ ತಾಲೂಕಿನ ಹನುಮಸಾಗರ, ಏ.15 ರಂದು ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ, ಏ.24 ರಂದು ಗಂಗಾವತಿಯ ತಾಲೂಕಿನ ಮುಸ್ಟೂರು ಗ್ರಾಮದಲ್ಲಿ, ಏ.25 ರಂದು ವಿರುಪಾಪೂರ ಗ್ರಾಮದಲ್ಲಿ, ಏ.26 ರಂದು ಕುಷ್ಟಗಿ ತಾಲೂಕಿನ ಮುದ್ದಲಗುಂದಿ ಗ್ರಾಮದಲ್ಲಿ, ಏ.28 ರಂದು ಗಂಗಾವತಿಯ ಹಿರೇಜಂತಕಲ್ ಗ್ರಾಮದಲ್ಲಿ, ಮೇ 02 ರಂದು ಗಂಗಾವತಿಯ ಹಣವಾಳ ಗ್ರಾಮದಲ್ಲಿ, ಮೇ.11 ರಂದು ಗಂಗಾವತಿಯ ಹೊಸ ಅಯೋಧ್ಯ ಮತ್ತು ಶ್ರೀರಾಮ ನಗರ ಗ್ರಾಮದಲ್ಲಿ, ಮೇ.12 ರಂದು ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದಲ್ಲಿ ಮತ್ತು ಮೇ 14 ರಂದು ಅಳವಂಡಿ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಬಾಲ್ಯವಿವಾಹಗಳನ್ನು ತಡೆದಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹೆಚ್ಚಿದ ಕೊರೊನಾ ಆತಂಕ – ವಿದ್ಯಾಗಮಕ್ಕೆ

ಬೆಂಗಳೂರು : ಹಲವು ತೊಂದರೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾಗಮಕ್ಕೆ ಬ್ರೇಕ್ ಹಾಕಿ ಆದೇಶ ಹೊರಡಿಸಿದೆ.

ಸುರೇಶ ಬಳಗಾನೂರ್ ಗೆ ರಾಜ್ಯ ಪತ್ರಿಕೋದ್ಯಮ ರತ್ನಪ್ರಶಸ್ತಿ

ಉತ್ತರಪ್ರಭ ಸುದ್ದಿ ಮಸ್ಕಿ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಮಾಡಿದ…

ಕೊರ್ಲಹಳ್ಳಿ: ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲು!

ಗದಗ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ಕೊರ್ಲಹಳ್ಳಿ ಸಮೀಪದಲ್ಲಿ ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ರಾಕಿ ಬಾಯ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ ತೆಲುಗು ಚಾನಲ್!

ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.