ಕೋಲ್ಕತಾ : ಬಂಗಾಳ ಕೊಲ್ಲಿಯಲ್ಲಿ ಅಂಫಾನ್ ಸೈಕ್ಲೋನ್ ರುದ್ರನರ್ತನ ಮುಂದುವರೆದಿದ್ದು, 12 ಜನ ಬಲಿಯಾಗಿದ್ದಾರೆ.

ಕೊರೊನಾ ವೈರಸ್ ನ ಹಾವಳಿಯ ಮಧ್ಯೆಯೇ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಅಬ್ಬರಿಸುತ್ತಿದೆ. ಗಂಟೆಗೆ ಸುಮಾರು 185 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಮಳೆಗೆ ಸಾವಿರಾರು ಮನೆಗಳು ಸಂಪೂರ್ಣವಾಗಿ ನಾಶಗೊಂಡಿವೆ. ಅಲ್ಲದೇ, ಸಾವಿರಾರು ಎಕರೆ ಕೃಷಿ ಭೂಮಿ ಹಾಳಾಗಿದೆ.

ಈ ಕುರಿತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಬಂಗಾಳದಲ್ಲಿ ಎದುರಾಗಿರುವ ಕೊರೊನಾ ಸಾಂಕ್ರಾಮಿಕ ರೋಗಕ್ಕಿಂತಲೂ ಚಂಡಮಾರುತದ ದುರಂತವೇ ದೊಡ್ಡದಾಗಿದೆ. 5 ಲಕ್ಷ ಜನರನ್ನು ಸ್ಥಳಾಂತರ ಮಾಡದೇ ಹೋಗಿದ್ದರೆ, ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಊಹಿಸುವುದಕ್ಕೂ ಕಷ್ಟವಾಗುತ್ತದೆ. ಚಂಡಮಾರುತದಿಂದ ಎದುರಾಗಿರುವ ನಷ್ಟ ಇನ್ನೂ ತಿಳಿದುಬಂದಿಲ್ಲ. ರೂ.1 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ನಮಗೆ ಎಲ್ಲರ ಸಹಕಾರ ಬೇಕಿದೆ. ರಾಜಕೀಯ ವಿಚಾರಗಳನ್ನು ಪಕ್ಕಕ್ಕಿಟ್ಟು ರಾಜ್ಯಕ್ಕೆ ಆರ್ಥಿಕ ಸಹಾಯ ಮಾಡುವಂತೆ ಕೇಂದ್ರದ ಬಳಿ ಮನವಿ ಮಾಡಿಕೊಳ್ಳಲಾಗುತ್ತದೆ.

ಚಂಡಮಾರುತದ ಅಬ್ಬಕ್ಕೆ 75,000ಕ್ಕೂ ಹೆಚ್ಚು ಜನರು ಇದೀಗ ನಿರ್ಗತಿಕರಾಗಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ನಿರಾಶ್ರಿತ ಕೇಂದ್ರಗಳಲ್ಲಿರುವ ಜನರಿಗೆ ಸೂಕ್ತ ರೀತಿಯ ಆಹಾರ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು. ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿರುವ ಪರಿಣಾಮ ಕರಾವಳಿ ಪ್ರದೇಶಗಳ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಅಧಿಕಾರಿಗಳಿಗೆ ಪಶ್ಚಿಮ ಬಂಗಾಳ ಸರ್ಕಾರ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕೆಜಿ “ಬಂಡಿ”ಗೆ ನಾನು ತಮಾಷೆ ಮಾಡಿದ್ದೆ: ಬಿ ಎಸ್ ವೈ ಸ್ಪಷ್ಟನೆ

ಉತ್ತರಪ್ರಭ ಸುದ್ದಿನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ…

ಬಾಗಲಕೋಟೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಬಾಗಲಕೋಟೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ‌ 137 ಏರಿಕೆಯಾಗಿದೆ.…

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು?

ಉತ್ತರಪ್ರಭ ಸುದ್ದಿನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ…

ಹೊಳೆ ಆಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಶವ ಪತ್ತೆ

ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.