ಹಾಸನ: ಪಿಜಿ ಬಾಡಿಗೆ ನೀಡಿಲ್ಲವೆಂಬ ಕಾರಣಕ್ಕೆ ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.

ಇಲ್ಲಿಯ ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮಸಿ ಓದುತ್ತಿದ್ದ ಯುವತಿಯರಿಬ್ಬರು, ಯುಗಾದಿ ಹಬ್ಬಕ್ಕೆಂದು ಮೈಸೂರಿನಲ್ಲಿರುವ ಮನೆಗೆ ತೆರಳಿದ್ದರು. ನಂತರ ಲಾಕ್ಡೌತನ್ ಆದ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಪಿಜಿಗೆ ಬಂದಿರಲಿಲ್ಲ.

ಇಂದು ಬಟ್ಟೆ, ಪುಸ್ತಕಗಳನ್ನು ತೆಗೆದುಕೊಂಡು ಹೋಗಲು ಬಾಡಿಗೆ ಕಾರು ಮಾಡಿಕೊಂಡು ಪಿಜಿಗೆ ಬಂದಿದ್ದಾರೆ. ಈ ವೇಳೆ ಎರಡು ತಿಂಗಳ ಬಾಡಿಗೆ ಹಣ ನೀಡಲೇಬೇಕು ಎಂದು ಪಿಜಿ ಮಾಲೀಕ ಒತ್ತಾಯಿಸಿದ್ದಾನೆ. ಈ ವೇಳೆ ಯುವತಿಯರು ಹಣವಿಲ್ಲ ಎಂದು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಅವರ ಮಾತಿಗೆ ಗೌರವ ನೀಡದ ಪಿಜಿ ಮಾಲೀಕ ಇಬ್ಬರನ್ನೂ ಪಿಜಿಯಲ್ಲೇ ಕೂಡಿ ಹಾಕಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಡಾವಣೆ ಪೊಲೀಸರು ಯುವತಿಯರಿಬ್ಬರನ್ನು ಬಿಡುಗಡೆಗೊಳಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…

ಗ್ರಾಪಂ ಮಾಜಿ ಅಧ್ಯಕ್ಷನ ದರ್ಪ!: ಮರಳು ಟಿಪ್ಪರ್ ನಿಧಾನವಾಗಿ ಓಡಿಸಿ ಅಂದಿದ್ದಕ್ಕೆ ಹಲ್ಲೆ ಮಾಡಿದ ಆರೋಪ

ಹೇಳೋದು ವೇದಾಂತ, ತಿನ್ನೋದು ಬದನೆಕಾಯಿ ಎನ್ನುತ್ತಾರಲ್ಲ, ಆ ರೀತಿಯ ಕಥೆಯಿದು. ಇಲ್ಲೊಬ್ಬ ವ್ಯಕ್ತಿ ಊರಿನ ಮುಖಂಡ. ಪ್ರತಿ ದಿನ ನಾಲ್ಕಾರು ಜನಕ್ಕೆ ಬುದ್ಧಿ ಹೇಳುತ್ತಿದ್ದ. ಸದ್ಯ ಈ ವ್ಯಕ್ತಿಯೇ ಕುಟುಂಬವೊಂದರ ಮೇಲೆ ದರ್ಪ ಮೆರೆದಿದ್ದಾನೆ.

ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಭಾರತ – ಚೀನಾ ಗಡಿಯಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ…