ಹಾಸನ: ಪಿಜಿ ಬಾಡಿಗೆ ನೀಡಿಲ್ಲವೆಂಬ ಕಾರಣಕ್ಕೆ ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.

ಇಲ್ಲಿಯ ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮಸಿ ಓದುತ್ತಿದ್ದ ಯುವತಿಯರಿಬ್ಬರು, ಯುಗಾದಿ ಹಬ್ಬಕ್ಕೆಂದು ಮೈಸೂರಿನಲ್ಲಿರುವ ಮನೆಗೆ ತೆರಳಿದ್ದರು. ನಂತರ ಲಾಕ್ಡೌತನ್ ಆದ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಪಿಜಿಗೆ ಬಂದಿರಲಿಲ್ಲ.

ಇಂದು ಬಟ್ಟೆ, ಪುಸ್ತಕಗಳನ್ನು ತೆಗೆದುಕೊಂಡು ಹೋಗಲು ಬಾಡಿಗೆ ಕಾರು ಮಾಡಿಕೊಂಡು ಪಿಜಿಗೆ ಬಂದಿದ್ದಾರೆ. ಈ ವೇಳೆ ಎರಡು ತಿಂಗಳ ಬಾಡಿಗೆ ಹಣ ನೀಡಲೇಬೇಕು ಎಂದು ಪಿಜಿ ಮಾಲೀಕ ಒತ್ತಾಯಿಸಿದ್ದಾನೆ. ಈ ವೇಳೆ ಯುವತಿಯರು ಹಣವಿಲ್ಲ ಎಂದು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಅವರ ಮಾತಿಗೆ ಗೌರವ ನೀಡದ ಪಿಜಿ ಮಾಲೀಕ ಇಬ್ಬರನ್ನೂ ಪಿಜಿಯಲ್ಲೇ ಕೂಡಿ ಹಾಕಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಡಾವಣೆ ಪೊಲೀಸರು ಯುವತಿಯರಿಬ್ಬರನ್ನು ಬಿಡುಗಡೆಗೊಳಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಹುಲ್ ಗಾಂಧಿ ಇಡಿ ವಿಚಾರಣೆ: ಜಿಲ್ಲಾಧಿಕಾರಿಗಳ ಕಛೇರಿಗೆ ಕಾಂಗ್ರೆಸ್ ಮುತ್ತಿಗೆ..!

ಉತ್ತರಪ್ರಭಗದಗ: ಎಲ್ಲೆಡೆ ರಾಹುಲ್ ಗಾಂದಿ ಇಡಿ ವಿಚಾರಕ್ಕಾಗಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಗದಗ ಜಿಲ್ಲಾದ್ಯಂತ…

ಭಾವೈಕ್ಯದ ಮಾಧುರ್ಯ ಬೆಳಕು ತೋಂಟದ ಸಿದ್ದಲಿಂಗ ಶ್ರೀ- ಪ್ರೊ.ಆಶಾದೇವಿ

ವರದಿ: ಗುಲಾಬಚಂದ ಜಾಧವಗದಗ : ತಾಯಿ ತನ್ನ ಮಕ್ಕಳಿಗೆ ಎಂದೂ ಭೇದಭಾವ ಮಾಡಲ್ಲ.ಹಾಗೆಯೇ ಬೆಂಕಿ,ಗಾಳಿ,ನೀರು ನಿಸರ್ಗದ…

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .