ಹಾಸನ: ಪಿಜಿ ಬಾಡಿಗೆ ನೀಡಿಲ್ಲವೆಂಬ ಕಾರಣಕ್ಕೆ ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.

ಇಲ್ಲಿಯ ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮಸಿ ಓದುತ್ತಿದ್ದ ಯುವತಿಯರಿಬ್ಬರು, ಯುಗಾದಿ ಹಬ್ಬಕ್ಕೆಂದು ಮೈಸೂರಿನಲ್ಲಿರುವ ಮನೆಗೆ ತೆರಳಿದ್ದರು. ನಂತರ ಲಾಕ್ಡೌತನ್ ಆದ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಪಿಜಿಗೆ ಬಂದಿರಲಿಲ್ಲ.

ಇಂದು ಬಟ್ಟೆ, ಪುಸ್ತಕಗಳನ್ನು ತೆಗೆದುಕೊಂಡು ಹೋಗಲು ಬಾಡಿಗೆ ಕಾರು ಮಾಡಿಕೊಂಡು ಪಿಜಿಗೆ ಬಂದಿದ್ದಾರೆ. ಈ ವೇಳೆ ಎರಡು ತಿಂಗಳ ಬಾಡಿಗೆ ಹಣ ನೀಡಲೇಬೇಕು ಎಂದು ಪಿಜಿ ಮಾಲೀಕ ಒತ್ತಾಯಿಸಿದ್ದಾನೆ. ಈ ವೇಳೆ ಯುವತಿಯರು ಹಣವಿಲ್ಲ ಎಂದು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಅವರ ಮಾತಿಗೆ ಗೌರವ ನೀಡದ ಪಿಜಿ ಮಾಲೀಕ ಇಬ್ಬರನ್ನೂ ಪಿಜಿಯಲ್ಲೇ ಕೂಡಿ ಹಾಕಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಡಾವಣೆ ಪೊಲೀಸರು ಯುವತಿಯರಿಬ್ಬರನ್ನು ಬಿಡುಗಡೆಗೊಳಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…

ಸ್ವಚ್ಛ ಪರಿಸರದ ಜಾಗೃತಿ ನಮ್ಮ ಆದ್ಯತೆಯಾಗಲಿ

ಉತ್ತರಪ್ರಭ ಇಂಡಿ: ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಇರುವುದರಿಂದ ಹೆಚ್ಚು ಹೆಚ್ಚು…

ಶೈಕ್ಷಣಿಕ ವರ್ಷ ಯಾವಾಗ ಅಂತಾ ಸೂಕ್ತ ತೀರ್ಮಾನ

ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎಂಬ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನದ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ತೋಂಟದ ಶ್ರೀ, ಹಡೇ೯ಕರ, ಹಳಕಟ್ಟಿ ಜಗದ ಯುಗ ಪುರುಷರು- ಪಟ್ಟಣಶೆಟ್ಟರ

ವರದಿ: ಗುಲಾಬಚಂದ ಜಾಧವಆಲಮಟ್ಟಿ : ಶಾಂತ ಚಿತ್ತತೆ,ಬದ್ದತೆ ಖ್ಯಾತಿಯ ಕನ್ನಡದ ಕುಲದೇವರಾದ ಲಿಂ,ತೋಂಟದ ಸಿದ್ದಲಿಂಗ ಶ್ರೀಗಳು,ಕರುನಾಡಿನ…