ಬಳ್ಳಾರಿ: ಮುಂಬಯಿನ ಮೀನದ ಮಾರುಕಟ್ಟೆಯಲ್ಲಿ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ಮರಳಿ ಬಂದಿದ್ದ ಜಿಲ್ಲೆಯ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಮೂರು ಕುಟುಂಬಗಳ ಸೋಂಕಿತರಲ್ಲಿ ಏಳು ಮಹಿಳೆಯರು, ಮೂವರು ಪುರುಷರು ಮತ್ತು ಓರ್ವ ಅಲ್ಪಸಂಖ್ಯಾತರಿದ್ದಾರೆ. ಮಹಿಳೆಯರ ಪೈಕಿ ಒಬ್ಬರು ಎಂಟು ತಿಂಗಳ ಗರ್ಭಿಣಿ ಮತ್ತು ಒಬ್ಬ ಬಾಣಂತಿ ಇದ್ದಾರೆ. ಅವರೆಲ್ಲರನ್ನು ಬುಧವಾರ ರಾತ್ರಿಯೇ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಳ್ಳಾರಿ ನಗರದ 6, ಬಳ್ಳಾರಿ ತಾಲೂಕಿನ ರೂಪನಗುಡಿಯ 3 ಮತ್ತು ಚಾಗನೂರಿನ ಇಬ್ಬರಿಗೆ ಸೋಂಕು ತಗುಲಿದೆ. ಬಾಣಂತಿಯ 9 ತಿಂಗಳ ಹಸುಗೂಸಿನ ಜೊತೆ ಅಜ್ಜ-ಅಜ್ಜಿ ಬಳಿ ಇದ್ದರು. ಹೀಗಾಗಿ ಅವರ ಗಂಟಲ ದ್ರವದ ಮಾದರಿಯನ್ನು ತಜ್ಞರ ನೆರವಿನೊಂದಿಗೆ ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುವುದು. 11 ಸೋಂಕಿತರೊಂದಿಗೆ ಮೊದಲ ಹಂತದ ಸಂಪರ್ಕ ಹೊಂದಿದ್ದ 49 ಮಂದಿ ಸೇರಿದಂತೆ 187 ಮಂದಿಯನ್ನು ಕ್ವಾರಂಟೈನ್ ಕೇಂದ್ರಗಳಲ್ಲಿರಿಸಲಾಗಿದೆ ಎಂದು ನಕುಲ್ ವಿವರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿಯಲ್ಲಿ ಪುಟ್ಟ ಮಕ್ಕಳ ಸಸ್ಯ ಸಂಭ್ರಮ

ಗುಲಾಬಚಂದ ಜಾಧವಆಲಮಟ್ಟಿ: ಮೊಗ್ಗಿನ ಎಳೆ ಮನಗಳಲ್ಲಿ ಸಸ್ಯ ಸಂಭ್ರಮ ಮೊಳಗಿತ್ತು. ಅಮಿತೋತ್ಸಾಹದ ಅಲೆಯಲ್ಲಿ ಹಸಿರೀಕರಣದ ಕಾಯಕಕ್ಕೆ…

ಗದಗ ನಗರ ಸಭೆ ಮತ ಎಣಿಕೆ ಮುಕ್ತಾಯ :15 ಕಾಂಗ್ರೇಸ್,18 ಬಿಜೆಪಿ 2 ಪಕ್ಷೇತರರು

ಗದಗ: ನಗರ ಸಭೆ ಮತ ಎಣಿಕೆ ಮುಕ್ತಾಯ ವಾಗಿದ್ದು ಒಟ್ಟು 15 ಕಾಂಗ್ರೇಸ್  18  ಬಿಜೆಪಿ …

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಅರಣ್ಯ ಇಲಾಖೆ ಕಣ್ಣಿದ್ದು ಕುರುಡಾಯಿತೆ?

ಗದಗ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಾಂತ ನಡೆಯುತ್ತಿರುವ ಸಾ-ಮಿಲ್ಗಳಿಗೆ ಯಾವುದೇ ಪರವಾನಿಗೆ ಇಲ್ಲದೆ ರಾಜಾರೋಷವಾಗಿ ಕಟ್ಟಿಗೆ ವ್ಯಾಪಾರ…

ಸರ್ಕಾರಿ ವಿವಿಗಳ ತಾತ್ಕಾಲಿಕ- ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತ ವಿಚಾರ ಸಂಕಿರಣ

ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.