ಬೆಂಗಳೂರು: ಅಪ್ಪಟ ಸುಳ್ಳು, ಅತಿರಂಜಿತ ವಿಷಯಗಳನ್ನೇ ಮುಂದಿಟ್ಟುಕೊಂಡು ಜನರನ್ನು ವಂಚಿಸುವ ಆಡಳಿತದ ಮುಂದುವರಿದ ಭಾಗವಾಗಿ @narendramodi ಅವರ ಕೋರೋನ ಪರಿಹಾರ ಪ್ಯಾಕೇಜ್ ನಮ್ಮ ಮುಂದಿದೆ. ಹೀಗಾಗಿ 20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ಕೊರೊನಾ ಪ್ಯಾಕೇಜ್ ವಿರುದ್ಧ ಕಿಡಿಕಾರಿದ್ದಾರೆ.
20 ಲಕ್ಷ ಕೋಟಿ ಪ್ಯಾಕೇಜ್ ಅನ್ನು ಕೊರೊನಗೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಈ ಕುರಿತು ತಕರಾರು ತೆಗೆದಿರುವ ಸಿದ್ದರಾಮಯ್ಯ 20 ಲಕ್ಷ ಕೋಟಿ ಮೊತ್ತದಲ್ಲಿ ಇರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದು, #6MahineKaNyayDoModiJi ಹ್ಯಾಷ್ ಟ್ಯಾಗ್ ನಡಿ ಟ್ವೀಟ್ ಮಾಡಿದ್ದಾರೆ.
ಆರು ತಿಂಗಳ ನ್ಯಾಯ ನೀಡಿ ಮೋದಿಜೀ ಎಂದ ಸಿದ್ದು

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ