ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು!

ಹಾಸನ: ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಹೊಟ್ಟೆ ನೋವು, ವಾಂತಿ, ಬೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಅಸ್ವಸ್ಥರಾಗಿದ್ದರು. ಹೀಗಾಗಿ ಅವರನ್ನು ನಗರದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಕಳೆದೆರಡು ತಿಂಗಳಿನಿಂದ ತಿಮ್ಮಕ್ಕ ನೆಲೆಸಿದ್ದಾರೆ.

ಹೊಟ್ಟೆ ನೋವು, ವಾಂತಿ, ಬೇದಿಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ.ಸಧ್ಯವೇ ಆರೋಗ್ಯ ಸುಧಾರಣೆ ಗಮನಿಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.” ಬಳ್ಕೂರು ಉಮೇಶ್ ಹೇಳಿದ್ದಾರೆ.

Exit mobile version