ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ರೋಗ ನಿಯಂತ್ರಿಸಲು ಎಲ್ಲ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಕೇಂದ್ರ ಸರ್ಕಾರ, ರಾಜ್ಯಗಳಿಗೆ ಮತ್ತೆ ಸೂಚಿಸಿದೆ.

ಲಾಕ್ ಡೌನ್ ಗೆ ಸಂಬಂಧಿಸಿದ ಗೃಹ ಸಚಿವಾಲಯದ ಮಾರ್ಗಸೂಚಿ ಜಾರಿಗೊಳಿಸಲು ಸ್ಥಳೀಯ ಆಡಳಿತಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದೆ. ಕೇಂದ್ರೀಯ ಮಾರ್ಗಸೂಚಿಗಳ ಉಲ್ಲಂಘನೆ ಸಂಬಂಧ ಮಾಧ್ಯಮಗಳ ವರದಿ ಹಾಗೂ ಇತರ ಮೂಲಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರಗಳ ಮುಖ್ಯಕಾರ್ಯದರ್ಶಿಗಳಿಗೆ ಈ ಸಂಬಂಧ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಕೋವಿಡ್-19 ನಿಯಂತ್ರಿಸುವ ಕ್ರಮಗಳ ಜಾರಿ ಖಾತರಿ ಪಡಿಸಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಕಂಟೈನ್ ಮೆಂಟ್ ಪ್ರದೇಶಗಳನ್ನು ಸೂಕ್ತವಾಗಿ ಗುರುತಿಸಿ, ಈ ವಲಯಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ನಿರ್ಬಂಧ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಅಥವಾ ಎಲ್ಲ ಅಗತ್ಯೇತರ ಚಟುವಟಿಕೆಗಳ ನಿಷೇಧಿಸಬೇಕೆಂದು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಪಟ್ಟಣದಲ್ಲಿ ಮಿತಿ ಮೀರಿದ ಹಂದಿಗಳ ಹಾವಳಿ; ಸ್ಪಂದಿಸದ ಮುಖ್ಯಾಧಿಕಾರಿಯ ವರ್ಗಾವಣೆಗೆ ನಾಗರಿಕರ ಪ್ರತಿಭಟನೆ…!

ಉತ್ತರಪ್ರಭ ನರೆಗಲ್ಲ: ಹಂದಿಗಳ ಹಾವಳಿಯಿಂದ ಪಟ್ಟಣದ ಜನತೆ ಹೈರಾಣಾಗಿದ್ದು ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ…

ರಾಜಕೀಯ ಹಗ್ಗ ಜಗ್ಗಾಟ: ಪಾಳುಬಿದ್ದ ಆಶ್ರಯ ಮನೆಗಳ ಪ್ರವೇಶಿಸಿದ ಜನರು

ನರೇಗಲ್ಲ: ರಾಜಕೀಯ ನಾಯಕರ ಹಗ್ಗ ಜಗ್ಗಾಟದಲ್ಲಿ 10 ವರ್ಷಗಳಿಂದ ಪಾಳುಬಿದಿದ್ದ ಆಶ್ರಯ ಮನೆಳಿಗೆ ಜನಸಾಮಾನ್ಯರು ಪ್ರವೇಶ ಪಡೆದಿದ್ದಾರೆ. ಇರುವ ಆಶ್ರಯ ಮನೆಗಳು ತಮ್ಮ ಹೆಸರಿಗೆ ಬಾರದಿದ್ದರೂ ಆಡಳಿತ ಯಂತ್ರದ ನಿರ್ಲಕ್ಷ್ಯ ಹಾಗೂ ತಮ್ಮ ಸಂಕಷ್ಟ ಸಹಿಸಲಾರದೆ ಮನೆಗಳನ್ನು ಸ್ವಚ್ಛಗೊಳಿಸಿಕೊಂಡು ಪ್ರವೇಶಿಸಿದ್ದಾರೆ.

ನಾಡಪ್ರಭು ವಿಮಾನ ನಿಲ್ದಾಣದ ಟರ್ಮಿನಲ್‌–2 ಉದ್ಘಾಟಿಸಿದ ಮೋದಿ

ಉತ್ತರಪ್ರಭ ಸುದ್ದಿ ಬೆಂಗಳೂರ: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು…

ಮಳೆ ನೀರು ಹರಿಯುವ ಕಾಲುವೆ ಹೂಳು ತೆರವು

ಹೀಗೆ ಮಾಡುವುದರಿಂದ ಕೊಳಚೆ ನೀರು ನಿಲ್ಲದಂತೆ ಮಾಡಬಹುದು, ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಜನರು ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹೇಳಿದರು.