ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ರೋಗ ನಿಯಂತ್ರಿಸಲು ಎಲ್ಲ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಕೇಂದ್ರ ಸರ್ಕಾರ, ರಾಜ್ಯಗಳಿಗೆ ಮತ್ತೆ ಸೂಚಿಸಿದೆ.

ಲಾಕ್ ಡೌನ್ ಗೆ ಸಂಬಂಧಿಸಿದ ಗೃಹ ಸಚಿವಾಲಯದ ಮಾರ್ಗಸೂಚಿ ಜಾರಿಗೊಳಿಸಲು ಸ್ಥಳೀಯ ಆಡಳಿತಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದೆ. ಕೇಂದ್ರೀಯ ಮಾರ್ಗಸೂಚಿಗಳ ಉಲ್ಲಂಘನೆ ಸಂಬಂಧ ಮಾಧ್ಯಮಗಳ ವರದಿ ಹಾಗೂ ಇತರ ಮೂಲಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರಗಳ ಮುಖ್ಯಕಾರ್ಯದರ್ಶಿಗಳಿಗೆ ಈ ಸಂಬಂಧ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಕೋವಿಡ್-19 ನಿಯಂತ್ರಿಸುವ ಕ್ರಮಗಳ ಜಾರಿ ಖಾತರಿ ಪಡಿಸಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಕಂಟೈನ್ ಮೆಂಟ್ ಪ್ರದೇಶಗಳನ್ನು ಸೂಕ್ತವಾಗಿ ಗುರುತಿಸಿ, ಈ ವಲಯಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ನಿರ್ಬಂಧ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಅಥವಾ ಎಲ್ಲ ಅಗತ್ಯೇತರ ಚಟುವಟಿಕೆಗಳ ನಿಷೇಧಿಸಬೇಕೆಂದು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯಸಭೆ ಕಲಾಪಕ್ಕೆ ಸರಕಾರವೇ ಹೊಣೆ: ಮಲ್ಲಿಕಾರ್ಜುನ ಖರ್ಗೆ

“ನಮ್ಮ ಧ್ವನಿಯನ್ನು ಹತ್ತಿಕ್ಕಲು ನಾವು ಬಿಡುವುದಿಲ್ಲ. ಇದಕ್ಕೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ ಮತ್ತು ನಾವು ಮೋದಿಜಿ ಯವರ ಯಾವುದೇ ಸರ್ವಾಧಿಕಾರಕ್ಕೆ ಅವಕಾಶ ನೀಡುವುದಿಲ್ಲ.”

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾರ್ಯಕ್ರಮ: ಕೆ.ಎಸ್.ಈಶ್ವರಪ್ಪ

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿ ಆರಂಭಿಸಲಾಗಿದೆ. ಅಂತರ್ಜಲ ಹೆಚ್ಚಿಸುವ ಕಾಮಗಾರಿಗೆ ಆದ್ಯತೆ ನೀಡಿರುವುದರಿಂದ ರಾಜ್ಯದಲ್ಲಿ ನರೇಗಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊರೊನಾ ಜಾಗೃತಿ ಬಗ್ಗೆ ಮಹಿಳೆಯೊಬ್ಬಳ ಮಾತುಗಳನ್ನು ನೀವೊಮ್ಮೆ ಕೇಳಲೇಬೇಕು..!

ಕೊರೊನಾದ ಅನುಭವ ಮಹಿಳೆಯೊಬ್ಬರ ಬಾಯಲ್ಲಿ ಕೇಳಿ.ಮಹಿಳೆಯೊಬ್ಬರು ಕೊರೊನಾದ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ…

ಶಿಘ್ರ ಆರಂಭವಾಗಲಿವೆ ದೇವಸ್ಥಾನಗಳು?

ಮುಂದಿನ ವಾರದಿಂದ ಭಕ್ತರಿಗೆ ದೇವರು ದರ್ಶನ ಕರುಣಿಸುವ ಸಾಧ್ಯತೆ ಇದೆ. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗುತ್ತಿದ್ದು ತೀರ್ಥ, ಪ್ರಸಾದಗಳಿಗೆ ಬ್ರೇಕ್ ಬೀಳುವ ಸಾದ್ಯತೆ ಇದೆ.