ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ರೋಗ ನಿಯಂತ್ರಿಸಲು ಎಲ್ಲ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಕೇಂದ್ರ ಸರ್ಕಾರ, ರಾಜ್ಯಗಳಿಗೆ ಮತ್ತೆ ಸೂಚಿಸಿದೆ.

ಲಾಕ್ ಡೌನ್ ಗೆ ಸಂಬಂಧಿಸಿದ ಗೃಹ ಸಚಿವಾಲಯದ ಮಾರ್ಗಸೂಚಿ ಜಾರಿಗೊಳಿಸಲು ಸ್ಥಳೀಯ ಆಡಳಿತಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದೆ. ಕೇಂದ್ರೀಯ ಮಾರ್ಗಸೂಚಿಗಳ ಉಲ್ಲಂಘನೆ ಸಂಬಂಧ ಮಾಧ್ಯಮಗಳ ವರದಿ ಹಾಗೂ ಇತರ ಮೂಲಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರಗಳ ಮುಖ್ಯಕಾರ್ಯದರ್ಶಿಗಳಿಗೆ ಈ ಸಂಬಂಧ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಕೋವಿಡ್-19 ನಿಯಂತ್ರಿಸುವ ಕ್ರಮಗಳ ಜಾರಿ ಖಾತರಿ ಪಡಿಸಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಕಂಟೈನ್ ಮೆಂಟ್ ಪ್ರದೇಶಗಳನ್ನು ಸೂಕ್ತವಾಗಿ ಗುರುತಿಸಿ, ಈ ವಲಯಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ನಿರ್ಬಂಧ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಅಥವಾ ಎಲ್ಲ ಅಗತ್ಯೇತರ ಚಟುವಟಿಕೆಗಳ ನಿಷೇಧಿಸಬೇಕೆಂದು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ

ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಧಾರ್ಮಿಕ ಕೇಂದ್ರಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ನವದೆಹಲಿ : ಕೇಂದ್ರ ಸರ್ಕಾರದ ಸೂಚನೆಯಂತೆ ಜೂ. 8ರಿಂದ ಎಲ್ಲ ಧಾರ್ಮಿಕ ಕೇಂದ್ರಗಳು ಮರಳಿ ಓಪನ್…

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿಂದು 1694 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…