ಹುಬ್ಬಳ್ಳಿ: ಆಹಾರ ಕಿಟ್ ಗಾಗಿ ಬಿಜೆಪಿ ಶಾಸಕರ ಮನೆಯ ಮುಂದೆ ಜನಸ್ತೋಮವೇ ತುಂಬಿದ್ದ ಪ್ರಸಂಗ ಜಿಲ್ಲೆಯ ಕಲಘಟಗಿಯಲ್ಲಿ ಕಂಡು ಬಂದಿದೆ.

ಕಲಘಟಗಿ ಶಾಸಕ ಸಿ.ಎಂ.ನಿಂಬಣ್ಣವರ ಮನೆ ಮುಂದೆ ಸುತ್ತಮುತ್ತಲಿನ ಗ್ರಾಮದ ನೂರಾರು ಜನರು ಆಹಾರ ಕಿಟ್ ನೀಡುವಂತೆ ಆಗ್ರಹಿಸಿ ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಮಹಿಳೆಯರು ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಕಂಡು ಬಂದಿದೆ.

ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ವಿತರಣೆ ಮಾಡಲು ನೀಡಿದ ಕಿಟ್ಗಳನ್ನು ಶಾಸಕರು ಬಿಜೆಪಿ ಕಾರ್ಯಕರ್ತರಿಗೆ ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದರಿಂದಾಗಿ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕಿದರು. ರಾಜ್ಯದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ವಿತರಿಸುತ್ತಿದ್ದಾರೆ. ನಮಗೂ ಆಹಾರದ ಕಿಟ್ಗಳನ್ನು ಕೊಡಿ ಎಂದು ಆಗ್ರಹಿಸಿದರು.

ಪ್ರತಿಭಟನೆಗೆ ಮುಂದಾಗಿದ್ದ ಮಹಿಳೆಯರನ್ನು ಶಾಸಕರ ಸಹಾಯಕರು ತಡೆದು ಮರಳಿ ಕಳುಹಿಸಿದರು. ಇದರಿಂದಾಗಿ ಕೋಪಗೊಂಡ ಮಹಿಳೆಯರು, ಬಡವರಿಗೆ ವಿತರಿಸಲು ಸರ್ಕಾರ ಕೊಟ್ಟ ಆಹಾರದ ಕಿಟ್ಗರಳನ್ನು ಇವರೇ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ತಮಿಳುನಾಡಿನಲ್ಲಿ ಕೊರೋನಾ ತಾಂಡವ: ಒಂದೇ ದಿನಕ್ಕೆ 161 ಪಾಸಿಟಿವ್

ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ವೈರಸ್ ತಾಂಡವಾಡುತ್ತಿದೆ. ಇಂದು ಒಂದೇ ದಿನ ಚೆನ್ನೈನಲ್ಲಿ 138 ಜನ ಸೇರಿದಂತೆ ತಮಿಳುನಾಡಿನಾದ್ಯಂತ ಒಟ್ಟು 161 ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,323ಕ್ಕೆ ಏರಿಕೆ ಕಂಡಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಹಿಂಪಡೆದ ಆಯೋಗ!

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಯಾವ ಜಿಲ್ಲೆಯ ಪೊಲೀಸರಿಗೆ ಕೊರೊನಾ ಬರುವುದಿಲ್ಲವೋ ಆ ಜಿಲ್ಲೆಯೇ ಗ್ರೀನ್ ಜೋನ್!

ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.