ಬೆಂಗಳೂರು: ರಾಜ್ಯಕ್ಕೆ ಇನ್ನೂ ಮೂರು ತಿಂಗಳು ಮಹಾ ಆಪತ್ತು ಕಾದಿದೆ ಎಂಬ ಸ್ಫೋಟಕ ಸತ್ಯವೊಂದು ತಜ್ಞರಿಂದ ಬಹಿರಂಗವಾಗಿದೆ.

ಹೀಗಾಗಿ ಟ್ರೈನ್, ಅಂತರ್ ರಾಜ್ಯ ಬಸ್ ಸೇವೆ ಇನ್ನೂ ಒಂದು ತಿಂಗಳು ಬೇಡ. ಅದರಲ್ಲೂ ಮಹಾರಾಷ್ಟ್ರಕ್ಕಂತೂ ಬಸ್ ಸೇವೆ ಬೇಡವೇ ಬೇಡ. ಒಂದು ವೇಳೆ ಕರೆತಂದರೂ ಕೊರೊನಾ ಟೆಸ್ಟ್ ಕಡ್ಡಾಯ ಮಾಡಿ. ಹಾಗೆಯೇ ಹೆಚ್ಚಿನ ಜನರನ್ನು ಒಟ್ಟಿಗೆ ಕ್ವಾರಂಟೈನ್ ಮಾಡಬೇಡಿ ಎಂದು ತಜ್ಞರು ಸರ್ಕಾರ ಹಾಗೂ ಆರೋಗ್ಯ ಇಲಾಖೆಗೆ ಎಚ್ಚರಿಕೆ ನೀಡಿದೆ ಎಂದು ತಿಳಿದು ಬಂದಿದೆ.

ನಾನಾ ರಾಜ್ಯಗಳಿಂದ ಕರ್ನಾಟಕಕ್ಕೆ ಬರಲು 1.69 ಲಕ್ಷ ಜನ ಸೇವಾ ಸಿಂಧುವಿನಡಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 43 ಸಾವಿರಕ್ಕೂ ಅಧಿಕ ಜನ ಮಹಾರಾಷ್ಟ್ರದಿಂದ ಬರಲು ಸಿದ್ಧರಾಗಿದ್ದಾರೆ. ಹೀಗಾಗಿ ಸರ್ಕಾರ ಮೇ. 31ರ ವರೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರಲು ಒಪ್ಪಿಗೆ ನೀಡಿಲ್ಲ. ಆದರೆ ಸೋಮವಾರದವರೆಗೆ ಸೇವಾ ಸಿಂಧುವಿನಡಿ ನೋಂದಣಿ ಮಾಡಿಕೊಂಡವರಿಗೆ ಅನುವು ಮಾಡಿದೆ. ಒಂದು ವೇಳೆ ಸರ್ಕಾರ ಮಹಾರಾಷ್ಟ್ರದಲ್ಲಿ ಸಿಲುಕಿದ ರಾಜ್ಯದ ಜನರಿಗೆ ಅವಕಾಶ ಮಾಡಿಕೊಟ್ಟರೆ ಇಲ್ಲಿಯ ಸ್ಥಿತಿಯಂತೂ ಅಲ್ಲೋಲ ಕಲ್ಲೋಲವಾಗಲಿದೆ.

ಕರ್ನಾಟಕಕ್ಕೆ ಈಗಾಗಲೇ ಮುಂಬೈ ಮಹಾರಾಷ್ಟ್ರದಿಂದ ಬೆಟ್ಟ ಗುಡ್ಡ ಹತ್ತಿ ಹೈವೇ ತಪ್ಪಿಸಿ ಕಳ್ಳದಾರಿಯಲ್ಲಿ ಅನೇಕರು ಬಂದಾಗಿದೆ. ಇವರ ಲೆಕ್ಕ ಇನ್ನೂ ಸಿಕ್ಕಿಲ್ಲ. ಇವರು ಕೊರೊನಾ ಹಂಚಿದರೆ ಇನ್ನೂ ಮೂರು ತಿಂಗಳು ರಾಜ್ಯಕ್ಕೆ ಅಪಾಯ ಕಾದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ರಷ್ಯಾ ಲಸಿಕೆ ಸುದ್ದಿ ನಂಬಿ ದಿಕ್ಕು ತಪ್ಪಿದ ‘ದೊಡ್ಡ’ ಮಾಧ್ಯಮ: ಅವಸರದ ನಡುವೆಯೂ ಉತ್ತರಪ್ರಭ ಸಂಯಮ

ಕಳೆದ ಭಾನುವಾರ ಮತ್ತು ಸೋಮವಾರ ಕೋರೊನಾ ಲಸಿಕೆ ಕುರಿತಂತೆ ಫೇಕ್ ಸುದ್ದಿಯನ್ನು ನಂಬಿದ ದೈತ್ಯ ಮೀಡಿಯಾ ಕಂಪನಿಗಳು ಎಡವಟ್ಟು ಮಾಡಿಕೊಂಡವು. ಆದರೆ ಉತ್ತರಪ್ರಭ ಸತ್ಯ ಪ್ರಕಟಿಸಿತ್ತು. ಈಗ ಅದನ್ನೇ ದೇಶದ ಮುಂಚೂಣಿ ಫ್ಯಾಕ್ಟ್ ಚೆಕ್ ಕಂಪನಿ ಅಲ್ಟ್ ನ್ಯೂಸ್ ಹೇಳಿದೆ.

ಜಾರ್ಖಂಡ್ ನಲ್ಲಿ ಜುಲೈ ಅಂತ್ಯದವರೆಗೆ ಲಾಕ್ ಡೌನ್ ಘೋಷಣೆ!

ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ…

ಆರೋಗ್ಯಕ್ಕೆ ಮಾರಕ ತಂಬಾಕು

ಹಾನಿಕಾರಕ ಎಂದು ತಂಬಾಕುಗಳಿoದ ಸಿದ್ಧವಾದ ಬಿಡಿ ಹಾಗೂ ಸಿಗರೇಟುಗಳ ಚೀಟು, ಪ್ಯಾಕೇಟು, ಕವರ್ ಹಾಗೂ ಬಾಕ್ಸ್ ಮೇಲೆ ಚೇಳಿನ ಚಿತ್ರದೊಂದಿಗೆ ಗಂಟಲು & ಬಾಯಿ ಕ್ಯಾನ್ಸರ್ ನ ಸ್ಪಷ್ಟ ಚಿತ್ರದೊಂದಿಗೆ ಮುದ್ರಿಸಿದ್ದರೂ ಜನರು ಹಗಲು ಕಂಡ ಬಾವಿಯಲ್ಲಿ ಇರುಳು ಹೋಗಿ ಬಿಳುವಂತ ಪರಸ್ಥಿತಿ ನಮ್ಮ ಮುಂದಿದೆ. ಒಂದು ವಯೋಮಾನದ ತರುಣರು, ತಂಬಾಕು ಮಿಶ್ರಿತ ಗುಟಕಾ, ಮಾವಾ, ಪಾನ್ ಬೀಡಾ, ಬೀಡಿ ಸಿಗರೇಟ್ ಗಳನ್ನು ಮೋಜು ಮಸ್ತಿಗಾಗಿ ಸೇವನೆ ಮಾಡುವುದು, ತಿಂದುಜಗಿಯುವುದು, ಅಗಿಯುವುದು,ಎಲ್ಲೆಂದರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು, ಹುಡುಗಿಗೆ ಹಠ ಇರಬಾರದು, ಹುಡುಗರಿಗೆ ಚಟ ಇರಬಾರದು ಎಂಬ ಮಾತು ನಿತ್ಯಸತ್ಯವಾಗಿದೆ. ಹುಡುಗರುಜಿದ್ದಿಗೆ ಬಿದ್ದವರಂತೆ ಮುಗಿ ಬಿದ್ದುಕೊಂಡು ಸೇವನೆ ಮಾಡುವುದನ್ನು ನೋಡಿದರೆ ನಮ್ಮ ಯುವ ಜನತೆ ಎತ್ತ ಸಾಗುತ್ತಿದೆ ಎಂಬುದೇ ತೋಚುತ್ತಿಲ್ಲ.

ನಾಲ್ಕ ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ!

ನವದೆಹಲಿ : ನಾಲ್ಕು ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.