ಬೆಂಗಳೂರು: ರಾಜ್ಯಕ್ಕೆ ಇನ್ನೂ ಮೂರು ತಿಂಗಳು ಮಹಾ ಆಪತ್ತು ಕಾದಿದೆ ಎಂಬ ಸ್ಫೋಟಕ ಸತ್ಯವೊಂದು ತಜ್ಞರಿಂದ ಬಹಿರಂಗವಾಗಿದೆ.

ಹೀಗಾಗಿ ಟ್ರೈನ್, ಅಂತರ್ ರಾಜ್ಯ ಬಸ್ ಸೇವೆ ಇನ್ನೂ ಒಂದು ತಿಂಗಳು ಬೇಡ. ಅದರಲ್ಲೂ ಮಹಾರಾಷ್ಟ್ರಕ್ಕಂತೂ ಬಸ್ ಸೇವೆ ಬೇಡವೇ ಬೇಡ. ಒಂದು ವೇಳೆ ಕರೆತಂದರೂ ಕೊರೊನಾ ಟೆಸ್ಟ್ ಕಡ್ಡಾಯ ಮಾಡಿ. ಹಾಗೆಯೇ ಹೆಚ್ಚಿನ ಜನರನ್ನು ಒಟ್ಟಿಗೆ ಕ್ವಾರಂಟೈನ್ ಮಾಡಬೇಡಿ ಎಂದು ತಜ್ಞರು ಸರ್ಕಾರ ಹಾಗೂ ಆರೋಗ್ಯ ಇಲಾಖೆಗೆ ಎಚ್ಚರಿಕೆ ನೀಡಿದೆ ಎಂದು ತಿಳಿದು ಬಂದಿದೆ.

ನಾನಾ ರಾಜ್ಯಗಳಿಂದ ಕರ್ನಾಟಕಕ್ಕೆ ಬರಲು 1.69 ಲಕ್ಷ ಜನ ಸೇವಾ ಸಿಂಧುವಿನಡಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 43 ಸಾವಿರಕ್ಕೂ ಅಧಿಕ ಜನ ಮಹಾರಾಷ್ಟ್ರದಿಂದ ಬರಲು ಸಿದ್ಧರಾಗಿದ್ದಾರೆ. ಹೀಗಾಗಿ ಸರ್ಕಾರ ಮೇ. 31ರ ವರೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರಲು ಒಪ್ಪಿಗೆ ನೀಡಿಲ್ಲ. ಆದರೆ ಸೋಮವಾರದವರೆಗೆ ಸೇವಾ ಸಿಂಧುವಿನಡಿ ನೋಂದಣಿ ಮಾಡಿಕೊಂಡವರಿಗೆ ಅನುವು ಮಾಡಿದೆ. ಒಂದು ವೇಳೆ ಸರ್ಕಾರ ಮಹಾರಾಷ್ಟ್ರದಲ್ಲಿ ಸಿಲುಕಿದ ರಾಜ್ಯದ ಜನರಿಗೆ ಅವಕಾಶ ಮಾಡಿಕೊಟ್ಟರೆ ಇಲ್ಲಿಯ ಸ್ಥಿತಿಯಂತೂ ಅಲ್ಲೋಲ ಕಲ್ಲೋಲವಾಗಲಿದೆ.

ಕರ್ನಾಟಕಕ್ಕೆ ಈಗಾಗಲೇ ಮುಂಬೈ ಮಹಾರಾಷ್ಟ್ರದಿಂದ ಬೆಟ್ಟ ಗುಡ್ಡ ಹತ್ತಿ ಹೈವೇ ತಪ್ಪಿಸಿ ಕಳ್ಳದಾರಿಯಲ್ಲಿ ಅನೇಕರು ಬಂದಾಗಿದೆ. ಇವರ ಲೆಕ್ಕ ಇನ್ನೂ ಸಿಕ್ಕಿಲ್ಲ. ಇವರು ಕೊರೊನಾ ಹಂಚಿದರೆ ಇನ್ನೂ ಮೂರು ತಿಂಗಳು ರಾಜ್ಯಕ್ಕೆ ಅಪಾಯ ಕಾದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಕೋವಿಡ್ 19 ನಿಯಮ ಉಲ್ಲಂಘನೆ: ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ಧ ದೂರು ದಾಖಲು

ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ…

ಲಾಕ್ ಡೌನ್ ನಲ್ಲೂ ನಿಮಗೆ ಬರ್ತಡೇ ಆಚರಣೆ ಬೇಕಿತ್ತಾ ಸಿಪಿಐ ಸಾಹೇಬರೇ??

ದೇಶದಲ್ಲಿ ಲಾಕ್ ಡೌನ್ ಇದ್ದಾಗಲೂ ನಮ್ಮ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ್ ಸಗರಿ ಲಾಕ್ ಡೌನ್ ಮದ್ಯದಲ್ಲೂ ಜನರ ಗುಂಪಿನ ಮದ್ಯೆ ನಿಂತು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ? ಎಂದು ಜಿಲ್ಲೆಯಲ್ಲೀಗ ಜನ ಮಾತಾಡಿಕೊಳ್ಳುತ್ತಿದ್ದಾರೆ.

ಗದಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯ ಅಂಧಾ ದರ್ಬಾರ್…!

ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರೆ ಮರಳು ಗಣಿಗಾರಿಕೆಗೆ ಸಿಲುಕಿ ನರಳುವಂತಾಗಿದೆ. ನಿತ್ಯ ಲೆಕ್ಕವಿಲ್ಲದಷ್ಟು ತುಂಗಭದ್ರೆಯ ಒಡಲು ಬಗೆಯುತ್ತಿದ್ದರೂ ತುಂಗವ್ವಾ ಮರಳು ಗಣಿಗಳ್ಳರ ದಾಯಕ್ಕೆ ಅಸಹಾಯಕಳಾಗಿ ಮೈಯೊಡ್ಡಿದ್ದಾಳೆ.

ಮಗಳ ಮದುವೆಗೆ ಕೂಡಿಟ್ಟ ಹಣ ಆಕ್ಸಿಜನ್ ಖರಿದಿಗೆ ದೇಣಿಗೆ ನೀಡಿದ ರೈತ

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಕೈಚೆಲ್ಲಿ ಕೂತಿರುವಾಗ, ಇಲ್ಲೊಬ್ಬ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿರುವ ಹಣವನ್ನು ಆಕ್ಸಿಜನ‌ ಖರೀದಿ ಮಾಡಲು ದೇಣಿಗೆ ನೀಡಿದ್ದಾನೆ.