ಮುಂಬಯಿ: ಕೊರೊನಾ ಮಹಾಮಾರಿಗೆ ಇಡೀ ಮಹಾರಾಷ್ಟ್ರವೇ ಕಂಗಾಲಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41 ಸಾವಿರ ಗಡಿ ದಾಟಿದೆ.
ಮುಂಬಯಿ ನಗರವೊಂದರಲ್ಲಿಯೇ ಬರೋಬ್ಬರಿ 25 ಸಾವಿರ ಜನರಲ್ಲಿ ಸೋಂಕು ಪತ್ತೆಯಾಗಿದೆ. ಹೀಗಾಗಿ ಜನರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಹೆಮ್ಮಾರಿ ವೈರಸ್ ಆರ್ಭಟಕ್ಕೆ ಕಳೆದ 24 ಗಂಟೆಗಳಲ್ಲಿ 1,382 ಜನರಲ್ಲಿ ಸೋಂಕು ಪತ್ತೆಯಾಗಿದೆ. 41ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.
ಈ ನಡುವೆ 285 ಜನ ಸೋಂಕಿನಿಂದ ಗುಣಮುಖರಾಗಿದ್ದು, ಈ ವರೆಗೂ ಗುಣಮುಖರಾದವರ ಸಂಖ್ಯೆ 6,751ಕ್ಕೆ ಏರಿಕೆಯಾಗಿದೆ. ಇದರಲ್ಲಿ 5,524 ಜನ ಸರ್ಕಾರಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, 1,227 ಮಂದಿ ಖಾಸಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ಬಿಎಂಸಿ ಮಾಹಿತಿ ನೀಡಿದೆ.