ಕಾರವಾರ: ಕೊರೊನಾ ಸೋಂಕಿತನ ಸಂಪರ್ಕ ಹೊಂದುವ ಮೂಲಕ ಕ್ವಾರಂಟೈನ್ ಆಗಿದ್ದ ವೃದ್ಧೆಯೊಬ್ಬರು ತಮಗೂ ಕೊರೊನಾ ಬಂದಿದೆ ಎಂದು ಭಯಗೊಂಡು, ಐಸೋಲೇಟೆಡ್ ವಾರ್ಡಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಈ ಘಟನೆ ನಡೆದಿದೆ. ಮಹರಾಷ್ಟ್ರದಿಂದ ಬಂದಿದ್ದ ಮೃತ ವೃದ್ಧೆಯ ಮೊಮ್ಮಗನಿಗೆ(ರೋಗಿ-1313) ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕಿತ ವ್ಯಕ್ತಿ ತಮ್ಮ ಇಬ್ಬರು ಅಜ್ಜಿಯರು ಹಾಗೂ ಸಹೋದರನ ಜೊತೆ ವಾಸವಾಗಿದ್ದರು. ಈ ಹಿನ್ನೆಲೆ ವ್ಯಕ್ತಿ ಸಂಪರ್ಕದಲ್ಲಿದ್ದ ಇಬ್ಬರು ಅಜ್ಜಿಯರು ಹಾಗೂ ಅವರ ಸಹೋದರನನ್ನು ದಾಂಡೇಲಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೊಮ್ಮಗನಿಗೆ ಸೋಂಕು ಬಂದಂತೆ ತಮಗೂ ಬಂದಿದೆ ಎಂದು ಭಾವಿಸಿ ವೃದ್ಧೆ ಖಿನ್ನತೆಗೊಳಗಾಗಿದ್ದರು. ಇದೇ ಕಾರಣಕ್ಕೆ ವೃದ್ಧೆ ಇಂದು ಐಸೋಲೇಟೆಡ್ ವಾರ್ಡಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೊಮ್ಮಗನಿಗೆ ಕೊರೊನಾ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಜ್ಜಿ!

Leave a Reply

Your email address will not be published. Required fields are marked *

You May Also Like

ಅಕ್ಕನಿಗೆ ಕೊರೊನಾ ಸೋಂಕು – ತಂಗಿಯ ಮದುವೆ ರದ್ದು!

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಸವಣೂರು –…

ಚೀನಾದಲ್ಲಿ ಎರಡನೇ ಅಲೆ ಎಬ್ಬಿಸಿದ ಕೊರೊನಾ!

ಬೀಜಿಂಗ್‌ : ಕೊರೊನಾ ಹುಟ್ಟಿಗೆ ಕಾರಣವಾಗಿರುವ ಚೀನಾದಲ್ಲಿ ಎರಡನೇ ಅಲೆ ಶುರುವಾಗಿದೆ. ಏಪ್ರಿಲ್‌ ನಂತರ ಮೊದಲ…

ಸರ್ಕಾರದ ಸೌಲಭ್ಯಗಳಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ

ಪಟ್ಟಣದ ಜನತೆ ವಸತಿ ಸೇರಿ ಹತ್ತು ಹಲವಾರು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಸ್ವಾರ್ಥಪರ ಚಿಂತನೆ ನಡೆಸುವ ಮೂಲಕ ಸಾರ್ವಜನಿಕರನ್ನು ಕಡೆಗಣಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆರೋಪಿಸಿದರು.

ಗದಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಶಂಕೆ..!

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಾಳೆ‌ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.