ಕಾರವಾರ: ಕೊರೊನಾ ಸೋಂಕಿತನ ಸಂಪರ್ಕ ಹೊಂದುವ ಮೂಲಕ ಕ್ವಾರಂಟೈನ್ ಆಗಿದ್ದ ವೃದ್ಧೆಯೊಬ್ಬರು ತಮಗೂ ಕೊರೊನಾ ಬಂದಿದೆ ಎಂದು ಭಯಗೊಂಡು, ಐಸೋಲೇಟೆಡ್ ವಾರ್ಡಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಈ ಘಟನೆ ನಡೆದಿದೆ. ಮಹರಾಷ್ಟ್ರದಿಂದ ಬಂದಿದ್ದ ಮೃತ ವೃದ್ಧೆಯ ಮೊಮ್ಮಗನಿಗೆ(ರೋಗಿ-1313) ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕಿತ ವ್ಯಕ್ತಿ ತಮ್ಮ ಇಬ್ಬರು ಅಜ್ಜಿಯರು ಹಾಗೂ ಸಹೋದರನ ಜೊತೆ ವಾಸವಾಗಿದ್ದರು. ಈ ಹಿನ್ನೆಲೆ ವ್ಯಕ್ತಿ ಸಂಪರ್ಕದಲ್ಲಿದ್ದ ಇಬ್ಬರು ಅಜ್ಜಿಯರು ಹಾಗೂ ಅವರ ಸಹೋದರನನ್ನು ದಾಂಡೇಲಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಮೊಮ್ಮಗನಿಗೆ ಸೋಂಕು ಬಂದಂತೆ ತಮಗೂ ಬಂದಿದೆ ಎಂದು ಭಾವಿಸಿ ವೃದ್ಧೆ ಖಿನ್ನತೆಗೊಳಗಾಗಿದ್ದರು. ಇದೇ ಕಾರಣಕ್ಕೆ ವೃದ್ಧೆ ಇಂದು ಐಸೋಲೇಟೆಡ್ ವಾರ್ಡಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೊಮ್ಮಗನಿಗೆ ಕೊರೊನಾ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಜ್ಜಿ!