ಕಾರವಾರ: ಕೊರೊನಾ ಸೋಂಕಿತನ ಸಂಪರ್ಕ ಹೊಂದುವ ಮೂಲಕ ಕ್ವಾರಂಟೈನ್ ಆಗಿದ್ದ ವೃದ್ಧೆಯೊಬ್ಬರು ತಮಗೂ ಕೊರೊನಾ ಬಂದಿದೆ ಎಂದು ಭಯಗೊಂಡು, ಐಸೋಲೇಟೆಡ್ ವಾರ್ಡಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಈ ಘಟನೆ ನಡೆದಿದೆ. ಮಹರಾಷ್ಟ್ರದಿಂದ ಬಂದಿದ್ದ ಮೃತ ವೃದ್ಧೆಯ ಮೊಮ್ಮಗನಿಗೆ(ರೋಗಿ-1313) ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕಿತ ವ್ಯಕ್ತಿ ತಮ್ಮ ಇಬ್ಬರು ಅಜ್ಜಿಯರು ಹಾಗೂ ಸಹೋದರನ ಜೊತೆ ವಾಸವಾಗಿದ್ದರು. ಈ ಹಿನ್ನೆಲೆ ವ್ಯಕ್ತಿ ಸಂಪರ್ಕದಲ್ಲಿದ್ದ ಇಬ್ಬರು ಅಜ್ಜಿಯರು ಹಾಗೂ ಅವರ ಸಹೋದರನನ್ನು ದಾಂಡೇಲಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೊಮ್ಮಗನಿಗೆ ಸೋಂಕು ಬಂದಂತೆ ತಮಗೂ ಬಂದಿದೆ ಎಂದು ಭಾವಿಸಿ ವೃದ್ಧೆ ಖಿನ್ನತೆಗೊಳಗಾಗಿದ್ದರು. ಇದೇ ಕಾರಣಕ್ಕೆ ವೃದ್ಧೆ ಇಂದು ಐಸೋಲೇಟೆಡ್ ವಾರ್ಡಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೊಮ್ಮಗನಿಗೆ ಕೊರೊನಾ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಜ್ಜಿ!

Leave a Reply

Your email address will not be published. Required fields are marked *

You May Also Like

ಆಕ್ಸಿಜನ್ ಬಗ್ಗೆ ಯಾರು ಭಯಪಡಬೇಡಿ: ಸಚಿವ ಪ್ರಹ್ಲಾದ್ ಜೋಷಿ

ಕೊವಿಡ್ ರೋಗಿಗಳಿಗಾಗಿ ವಿಶೇಷ ಹೆಚ್ಚುವರಿ 10 ಆ್ಯಂಬ್ಯುಲೇನ್ಸ್ ಸಿದ್ಧಪಡಿಸಲಾಗಿದೆ. ಜನರು ಜಾಗೃತರಾಗಿರಬೇಕು. ಆದರೆ ಜನರು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಆನ್ ಲೈನ್ ಶಿಕ್ಷಣದ ಬಗ್ಗೆ ನಾಳೆ ಮಹತ್ವದ ಸಭೆ: ಸಚಿವ ಸುರೇಶ್ ಕುಮಾರ್

ಎಲ್ ಕೆಜಿ, ಯುಕೆಜಿ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಆದ್ಯತೆ ನೀಡಿ- ಗಜಾನನ ಮನ್ನಿಕೇರಿ

ನಿಡಗುಂದಿ: ಕೋವಿಡ್ ಲಾಕ್ ಡೌನ್ ನಂತರ ಭೌತಿಕ ತರಗತಿಯ ಬಳಿಕ ಎಸ್ ಎಸ್ ಎಲ್ ಸಿ…

ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ.