ನವದೆಹಲಿ: ಅಂಫಾನ್ ಚಂಡಮಾರುತಕ್ಕೆ ಕಂಗಾಲಾಗಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕನ ನಡೆಸುತ್ತಿದ್ದಾರೆಂದು ವರದಿಗಳಿಂದ ಶುಕ್ರವಾರ ತಿಳಿದು ಬಂದಿದೆ.

ನಿನ್ನೆಯಷ್ಟೇ ವೈಮಾನಿಕ ಸಮೀಕ್ಷೆ ನಡೆಸಲು ಪಶ್ಚಿಮಬಂಗಾಳಕ್ಕೆ ತೆರಳುತ್ತೇನೆಂದು ತಿಳಿಸಿದ್ದ ಪ್ರಧಾನಿ ಮೋದಿಯವರು ಇಂದು ಬೆಳಿಗ್ಗೆ ನವದೆಹಲಿಯಿಂದ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಇದರಂತೆ ರಾಜ್ಯಕ್ಕೆ ಆಗಮಿಸಿದ ಪ್ರಧಾನಮಂತ್ರಿಗಳನ್ನು ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೇ ಸ್ವಾಗತಿಸಿದರು.

ಇದೀಗ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಿಗೆ ಸಿಎಂ ಮಮತಾ ಬ್ಯಾನರ್ಜಿ ಕೂಡ ಸಾಥ್ ನೀಡಿದ್ದಾರೆ.

ಮಮತಾ ಬ್ಯಾನರ್ಜಿಯವರೊಂದಿಗೆ ಮಾತುಕತೆ ನಡೆಸಿದ ಬಳಿಕ, ಪ್ರಧಾನಿ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಅಧಿಕಾರಿಗಳಿಂದ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಪರಿಸ್ಥಿತಿ ಅವಲೋಕನ ನಡೆಸಿದ ಬಳಿಕ ಸಭೆ ನಡೆಸಲಿರುವ ಮೋದಿಯವರು ನಿರಾಶ್ರಿತ ಕೇಂದ್ರ ಹಾಗೂ ಪರಿಹಾರ ಕುರಿತು ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಕಂದಮ್ಮಳಿಗೆ ಕೊರೊನಾ ಕಾಟ : ಇಂದು 4 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 203…

ಶಿಕ್ಷಕರಿಗೆ-ಪಾಲಕರಿಗೆ ದಂಗುಬಡಿಸಿದ ಈ ಪೋರಿ

ಕೋವಿಡ್ ಸೋಮಕಿನಿಂದ ಆನ್ಲೈನ್ ಕ್ಲಾಸ್ಗಳು ಹಾಗೂ ವರ್ಕ್ ಫ್ರಂ ಹೋಂಗೆ ಜನರು ಒಗ್ಗಿ ಹೋಗಿದ್ದಾರೆ. ಆದರೆ, ಇಲ್ಲೊಬ್ಬಳು ಬಾಲಕಿ ಶಿಕ್ಷಕರನ್ನು ಮತ್ತು ಪೋಷಕರನ್ನು ಮೂರ್ಖನ್ನಾಗಿ ಮಾಡಿದ್ದಾಳೆ.

ಅಂದರ್ ಬಾಹರ್: ಪೋಲಿಸರ್ ಕಾರ್ಯಾಚರಣೆ : 14 ಲಕ್ಷ ರೂ. ಜಪ್ತಿ, 17 ಜನರ ಮೇಲೆ ಪ್ರಕರಣ ದಾಖಲು, ಸರ್ಕಾರಿ ನೌಕರ ಭಾಗಿ

ಉತ್ತರಪ್ರಭ ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ…

ಗದಗ ಜಿಲ್ಲೆ ಗ್ರಾಮಗಳು ಗಡಗಡ: ಯಾವ ತಾಲೂಕಿನಲ್ಲಿ ಎಷ್ಟು ಕೊರೊನಾ ಪ್ರಕರಣ?

ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು…