ನವದೆಹಲಿ: ಅಂಫಾನ್ ಚಂಡಮಾರುತಕ್ಕೆ ಕಂಗಾಲಾಗಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕನ ನಡೆಸುತ್ತಿದ್ದಾರೆಂದು ವರದಿಗಳಿಂದ ಶುಕ್ರವಾರ ತಿಳಿದು ಬಂದಿದೆ.

ನಿನ್ನೆಯಷ್ಟೇ ವೈಮಾನಿಕ ಸಮೀಕ್ಷೆ ನಡೆಸಲು ಪಶ್ಚಿಮಬಂಗಾಳಕ್ಕೆ ತೆರಳುತ್ತೇನೆಂದು ತಿಳಿಸಿದ್ದ ಪ್ರಧಾನಿ ಮೋದಿಯವರು ಇಂದು ಬೆಳಿಗ್ಗೆ ನವದೆಹಲಿಯಿಂದ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಇದರಂತೆ ರಾಜ್ಯಕ್ಕೆ ಆಗಮಿಸಿದ ಪ್ರಧಾನಮಂತ್ರಿಗಳನ್ನು ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೇ ಸ್ವಾಗತಿಸಿದರು.

ಇದೀಗ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಿಗೆ ಸಿಎಂ ಮಮತಾ ಬ್ಯಾನರ್ಜಿ ಕೂಡ ಸಾಥ್ ನೀಡಿದ್ದಾರೆ.

ಮಮತಾ ಬ್ಯಾನರ್ಜಿಯವರೊಂದಿಗೆ ಮಾತುಕತೆ ನಡೆಸಿದ ಬಳಿಕ, ಪ್ರಧಾನಿ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಅಧಿಕಾರಿಗಳಿಂದ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಪರಿಸ್ಥಿತಿ ಅವಲೋಕನ ನಡೆಸಿದ ಬಳಿಕ ಸಭೆ ನಡೆಸಲಿರುವ ಮೋದಿಯವರು ನಿರಾಶ್ರಿತ ಕೇಂದ್ರ ಹಾಗೂ ಪರಿಹಾರ ಕುರಿತು ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿನ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ!

ನವದೆಹಲಿ : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿಯಾಗಿ ಜಯ ಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿ, ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬಂಜಾರ ಸಮಾಜದ ಕುಲಗುರು ಪೂಜ್ಯ ಡಾ.ರಾಮ್ ರಾವ್ ಮಹಾರಾಜ್ ಲಿಂಗೈಕ್ಯ

ಬಂಜಾರ – ಲಂಬಾಣಿ ಸಮಾಜದ ಕುಲಗುರು, ಸಂತ ಸೇವಾಲಾಲ್ ವಂಶಸ್ಥರಾದ ಪೂಜ್ಯ ಡಾ.ರಾಮ್ ರಾವ್ ಮಹಾರಾಜ್ ಶುಕ್ರವಾರ ಲಿಂಗೈಕ್ಯರಾಗಿದ್ದಾರೆ.

ಮೊಬೈಲ್ ಗಾಗಿ ಅಜ್ಜಿಯ ತಲೆಯನ್ನೇ ಕತ್ತರಿಸಿದ ಮೊಮ್ಮಗ!

ಮುಂಬಯಿ : ಮೊಬೈಲ್ ಗಿಫ್ಟ್ ಕೊಡಲು ನಿರಾಕರಿಸಿದ ಅಜ್ಜಿಯ ತಲೆಯನ್ನೇ ಕತ್ತರಿಸಿ ಟೇಬಲ್ ಮೇಲಿಟ್ಟು ಮೊಮ್ಮಗ ವಿಕೃತಿ ಮೆರೆದಿರುವ ಘಟನೆ ನಡೆದಿದೆ.

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಖರ್ಗೆ

ಇದೇ 19ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು.