ಹಿರಿಯರು ದೇವರ ಹೆಸರಿನಲ್ಲಿ ಉಪವಾಸ ಎಂಬ ಪದ್ಧತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ಆದರೆ, ಅದರ ಹಿಂದೆ ವೈಜ್ಞಾನಿಕ ಸತ್ಯವೂ ಇದೆ.

ನಿರ್ದಿಷ್ಟ ಅವಧಿಯ ವರೆಗೆ ಘನ ಆಹಾರ, ನಿಕೋಟಿನ್ ಮತ್ತು ಕೆಫೀನ್ ನಂತಹ ಅಂಶಗಳನ್ನು ಸೇವಿಸದೇ ಇರುವುದು ಉಪವಾಸದ ಕ್ರಮ. ಈ ಮಾತು ದೀರ್ಘಕಾಲದ ಕಾಯಿಲೆಗಳನ್ನು ಗುಣಪಡಿಸುವಲ್ಲಿ, ಈಗಲೂ ಉಪಯುಕ್ತವೆನ್ನುವುದನ್ನು ವೈದ್ಯಕೀಯ ಕ್ಷೇತ್ರ ಅಂಗೀಕರಿಸಿದೆ.

ವೈದ್ಯಕೀಯ ಡಾಟಾ ಹಾಗೂ ಸಂಶೋಧಾನೆ ಆಧಾರಿತ ಅಂಶಗಳಿಂದ ಕ್ಯಾಲೊರಿಗಳಿಗೆ ಕಡಿವಾಣ ಹಾಕುವುದು ಹಾಗೂ ಉಪವಾಸ ಮಾಡುವುದರಿಂದ ಅಧಿಕ ರಕ್ತದೊತ್ತಡ, ಚಯಾಪಚಯ ಸಮಸ್ಯೆಗಳು, ಉರಿಯೂತದ ಕಾಯಿಲೆಗಳು, ಮಾನಸಿಕ ಅಸ್ವಸ್ಥತೆಗಳು ಮತ್ತು ಅಟೊಪಿಕ್ ಸಮಸ್ಯೆಗಳಿಗೆ ವೈದ್ಯಕೀಯ ಪ್ರಯೋಜನಗಳಾಗುವುದು ಸ್ಪಷ್ಟವಾಗಿದೆ. 

ಭಾರತದಲ್ಲಿ ಶೇ.61 ರಷ್ಟು ಸಾವುಗಳು ಸಾಂಕ್ರಾಮಿಕವಲ್ಲದ ಆರೋಗ್ಯ ಸಮಸ್ಯೆಗಳಿಂದ ಸಂಭವಿಸುತ್ತಿದ್ದು, ಈ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವುದಕ್ಕೆ ಹಾಗೂ ತಡೆಗಟ್ಟುವುದಕ್ಕೆ ಉಪವಾಸ ವಿಧಾನ ಅತ್ಯವಶ್ಯ ಎಂದು ವೈದ್ಯಕೀಯ ಲೋಕ ಹೇಳುತ್ತಿದೆ.

ಇದನ್ನು ಕ್ರಮಬದ್ಧವಾಗಿ ಆಚರಿಸಿದರೆ ಹೊಸ ಚೈತನ್ಯ ಮೂಡಿ, ಬಯಕೆಗಳನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಉಪವಾಸದ ಅವಧಿಯಲ್ಲಿ ತಾಜಾ ಹಣ್ಣಿನ ಜ್ಯೂಸ್, ನಿಂಬೆ ಹಣ್ಣಿನ ರಸ, ಜೇನುತುಪ್ಪ, ವೆಜಿಟೆಬಲ್ ಸೂಪ್ ಗಳನ್ನು ಸೇವಿಸುವ ಮೂಲಕ ದಿನವೊಂದಕ್ಕೆ ಕ್ಯಾಲೋರಿಯನ್ನು ಗರಿಷ್ಠ 300ಕ್ಕೆ ಸೀಮಿತಗೊಳಿಸಬಹುದಾಗಿದ್ದು ಈ ಪ್ರಕ್ರಿಯೆ  ಪಿತ್ತಜನಕಾಂಗ, ಮೂತ್ರಪಿಂಡಗಳು, ಕರುಳುಗಳು, ಚರ್ಮ ಮತ್ತು ಶ್ವಾಸಕೋಶಗಳ ಸ್ವಾಸ್ಥ್ಯವಾಗಿರಿಸುತ್ತದೆ.

ಉಪವಾಸದ ಅವಧಿಯಲ್ಲಿ ಚಟುವಟಿಕೆಗಳು ಹಾಗೂ ವಿಶ್ರಾಂತಿಯ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಗಮನಾರ್ಹ ಸಂಗತಿ. ಒಮ್ಮೆ ಉಪವಾಸದ ನಂತರ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವುದಕ್ಕೆ ಸಾವಧಾನದಿಂದ ಘನ ಆಹಾರಗಳನ್ನು ಪುನಃ ಸೇವಿಸಬೇಕಾಗುತ್ತದೆ. ಉಪವಾಸ ಪ್ರಕ್ರಿಯೆ ಚಯಾಪಚಯ, ಹೃದಯರಕ್ತನಾಳದ ಮತ್ತು ಮಾನಸಿಕ ಪರಿಣಾಮಗಳನ್ನು ಹೊಂದಿರುತ್ತದೆಯಾದ್ದರಿಂದ ಇವುಗಳ ಬಗ್ಗೆ ಸಂಪೂರ್ಣ ನಿಗಾವಹಿಸಬೇಕಾಗುತ್ತದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ರೋಗಿಗಳಲ್ಲಿ ಕುಸಿಯುತ್ತಿದೆ ಆಮ್ಲಜನಕ – ಹೆಚ್ಚಿದ ಐಸಿಯು ಬೇಡಿಕೆ!

ಬೆಂಗಳೂರು : ರಾಜ್ಯದಲ್ಲಿನ ಕೊರೊನಾ ರೋಗಿಗಳಲ್ಲಿ ಆಮ್ಲಜನಕ ಮಟ್ಟ ಕುಸಿಯುತ್ತಿದ್ದು, ಐಸಿಯು (ತೀವ್ರ ನಿಗಾ ಘಟಕ)…

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…

ನಟ ಶಿವರಾಜ್ ಕುಮಾರ್ ಜೊತೆ ಮಂಗ್ಲಿ ನಟಿಸ್ತಾರಂತೆ?

ಇಷ್ಟು ದಿನ ಕಣ್ಣೇ ಅದಿರಿಂದ ಹಾಡಿನ ಮೂಲಕ ಕರ್ನಾಟಕ ಜನತೆಯನ್ನು ತಮ್ಮತ್ತ ಸೆಳೆದುಕೊಂಡಿದ್ದ ಮಂಗ್ಲಿ ಈಗ ನಟನೆಯ ಮೂಲಕವೂ ಕನ್ನಡಿಗರಿಗೆ ಹತ್ತಿರ ಆಗಲು ಪ್ರಯತ್ನಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳಲ್ಲಿ ನಟಿಸುವಂತೆ ಅವರಿಗೆ ಬೇಡಿಕೆ ಬರುತ್ತಿದೆ. ಆ ಪೈಕಿ ಒಂದು ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರೆ. ಅದು ಶಿವರಾಜ್​ಕುಮಾರ್​ ನಟನೆಯ ಚಿತ್ರ ಎಂಬುದು ವಿಶೇಷ.

ನರೇಗಲ್ಲ್ ನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಕ್ಕಮ್ಮ ಯ ಮಣೋಡ್ಡರ ಹೇಳಿದರು.