ಧಾರವಾಡ: ಬೀದರ್ ನಲ್ಲಿ ಗರ್ಭಿಣಿ ಸೇರಿದಂತೆ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ಕೂಡ ಇಂದು ಇಬ್ಬರಲ್ಲಿ ಸೋಂಕು ಕಂಡು ಬಂದಿದೆ.

ಧಾರವಾಡದ 22 ಹಾಗೂ 23 ವರ್ಷದ ಯುವಕರಲ್ಲಿ ಸೋಂಕು ಪತ್ತೆಯಾಗಿದೆ. ಇವರಿಬ್ಬರು ನವದೆಹಲಿಯಿಂದ ರೈಲಿನಲ್ಲಿ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಿಂದ ಬಂದ ಬೀದರ್ ನ ಕುಟುಂಬಸ್ಥರಿಗೆ ಸೋಂಕು ಅಂಟಿಕೊಂಡಿದೆ. ಗರ್ಭಿಣಿ, ಮಗು ಸೇರಿದಂತೆ ಒಟ್ಟು 6 ಜನರಲ್ಲಿ ಇಂದು ಸೋಂಕು ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದ 23 ವಯಸ್ಸಿನ ಗರ್ಭಿಣಿ, 2 ವರ್ಷದ ಮಗುವಿಗೆ ಸೋಂಕು ತಗುಲಿದೆ. ಸೊಲ್ಲಾಪುರದಿಂದ ಇವರು ಹಳ್ಳಿಖೇಡ ಗ್ರಾಮಕ್ಕೆ ಬಂದಿದ್ದರು. ಇವರ ವೈದ್ಯಕೀಯ ತಪಾಸಣೆ ಮಾಡಿದಾಗ ಸೋಂಕು ಇರುವುದು ದೃಢಡವಾಗಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ನಿಯಮ ಉಲ್ಲಂಘಿಸಿ ಬರ್ತ್ ಡೇ ಪಾರ್ಟಿ: ಶ್ರೀರಾಮುಲು ಆಪ್ತನಿಗೆ ಬಿಜೆಪಿ ಗೇಟ್ಪಾಸ್

ಕೋವಿಡ್ ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಆಚರಿಸಿಕೊಂಡಿದ್ದ ಶ್ರೀರಾಮುಲು ಆಪ್ತ ಎಚ್.ಎಸ್. ಶಿವನಗೌಡರನ್ನು ಜಿಲ್ಲಾ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಪೊಲೀಸರು ಪಾರ್ಟಿ ಕುರಿತಂತೆ ಕೋರ್ಟಿನಲ್ಲಿ ಸ್ವಯಂ ದೂರು ದಾಖಲಿಸಿದ್ದು ಇಂದು ಸೋಮವಾರ ಶಿವನಗೌಡರು ಕೋರ್ಟಿಗೆ ಹಾಜರಾಗಬಹುದು ಎನ್ನಲಾಗಿದೆ.

ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ!

ಬೀದರ್: ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.ಇಲ್ಲಿಯ…

ಕೊರೊನಾ ಸೋಂಕು: ಗದಗನಲ್ಲಿಂದು ಇಬ್ಬರು ಬಿಡುಗಡೆ

ಗದಗ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಇಂದು ಮತ್ತಿಬ್ಬರು ಬಿಡುಗಡೆ ಹೊಂದಿದರು. ಪಿ-1745(17 ವರ್ಷ), ಪಿ-1795 (16 ವರ್ಷ) ಇಬ್ಬರು ಯುವಕರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

ಕಾಂಗ್ರೆಸ್ ಸೇರಲು ವರ್ತೂರು ಪ್ರಕಾಶ್ ತೀರ್ಮಾನ

ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಯದಂತೆ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಈಗಾಗಲೇ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಅಂತಿಮ ನಿರ್ಧಾರವಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.