ಬೆಂಗಳೂರು: ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .
ತಪಾಸಣೆಗೆ ಒಳಪಡುವ ಎಲ್ಲರೂ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡಿರಬೇಕು. ಜೊತೆಗೆ ತಮ್ಮದೇ ಮೊಬೈಲ್ ಸಂಖ್ಯೆ ದಾಖಲಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಮ್ಮದಲ್ಲದ ಮೊಬೈಲ್ ಸಂಖ್ಯೆ ದಾಖಲಿಸಿದರೆ ಸೋಂಕು ತಪಾಸಣೆ ಮತ್ತು ಇತರೆ ಮಾಹಿತಿಗಳು ಅವರಿಗೆ ತಲುಪುವುದಿಲ್ಲ. ಜೊತೆಗೆ ತಪಾಸಣೆಗೆ ಒಳಪಟ್ಟವರಿಗೆ ಆರೋಗ್ಯ ಸೇತು ಆ್ಯಪ್ ಮೂಲಕ ನಿಯಮಿತವಾಗಿ ರವಾನಿಸುವ ಯಾವುದೇ ಮಾಹಿತಿ ಸಿಗುವುದಿಲ್ಲ. ಹೀಗಾಗಿ ತಾವು ಬಳಸುವ ಮೊಬೈಲ್ ಸಂಖ್ಯೆಯನ್ನು ಮಾತ್ರವೇ ನಮೂದಿಸಬೇಕು ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಈ ಹಿಂದೆ ಕೊರೋನಾ ಸೋಂಕು ತಪಾಸಣೆಗೆ ಒಳಗಾದ ಕೆಲವರು ತಮ್ಮ ಸಂಬಂಧಿಗಳ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಇದರಿಂದ ಅಧಿಕೃತ ಮಾಹಿತಿ ಅವರಿಗೆ ತಲುಪದೇ ಸಾಕಷ್ಟು ಗೊಂದಲಗಳು ಎದುರಾದವು. ಅದೇ ರೀತಿಯ ತಪ್ಪುಗಳು ಪುನರಾವರ್ತನೆ ಆಗದಂತೆ ತಪ್ಪಿಸುವ ಉದ್ದೇಶದಿಂದ ಸರಿಯಾದ, ತಾವೇ ಬಳಸುವ ಮೊಬೈಲ್ ಸಂಖ್ಯೆ ನಮೂದಿಸುವಂತೆ ಹೇಳಿಕೆಯಲ್ಲಿ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಯುವ ಕಾಂಗ್ರೆಸ್ ಅಧ್ಯಕ್ಷ ಸರ್ಫರಾಜ್ ಅವರಿಗೆ ಅಭಿನಂದನೆ

ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸರ್ಫರಾಜ್ ಸೂರಣಗಿಯವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಅಭಿನಂದಿಸಿದರು.

ಆಲಮಟ್ಟಿ ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಉತ್ತರಪ್ರಭ ರಾಜಕಾರಣಗೊಸ್ಕರ ಕೆಲಸ ಮಾಡುತ್ತಿಲ್ಲ- ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಗುಲಾಬಚಂದ ಜಾಧವಆಲಮಟ್ಟಿ: ಕೇವಲ ರಾಜಕಾರಣಗೋಸ್ಕರ ನಾವು…

ನಿಮ್ಮೊಡನಿದ್ದೂ ನಿಮ್ಮಂತಾಗದೆ

ಪ್ರಸ್ತುತ ಸಂದರ್ಭದಲ್ಲಿ ನಿಸಾರ್ ಅಹ್ಮದ್ ಅವರು ರಚಿಸಿದ ನಿಮ್ಮೊಡನಿದ್ದೂ ನಿಮ್ಮಂತಾಗದೆ ಎನ್ನುವ ಕವನ ಇಂದಿನ ದಿನಮಾನಗಳಲ್ಲಿ ವಾಸ್ತವಕ್ಕೆ ಹತ್ತಿರವಾಗಿದ್ದು, ನಮ್ಮನ್ನಗಲಿದ ಸಾಹಿತಿ ಕೆ.ಎಸ್.ನಿಸಾರ್ ಅಹ್ಮದ್ ಅವರಿಗೆ ‘ಉತ್ತರ ಪ್ರಭ’ದ ನುಡಿ ನಮನ…

ಹೊಸ ಶಿಕ್ಷಣ ನೀತಿ ಸಾಕಾರಕ್ಕೆ ಸಹಕಾರ ಅಗತ್ಯ- ಅರುಣ ಶಹಾಪುರ

ವರದಿ: ಗುಲಾಬಚಂದ ಜಾಧವ ಉತ್ತರಪ್ರಭಆಲಮಟ್ಟಿ: ಮೂವತ್ತು ನಾಲ್ಕು ವಸಂತಗಳ ಬಳಿಕ 21 ನೇ ಶತಮಾನ ಕಂಡ…