ಹಾವೇರಿ: ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಸಂತೋಷ ವಿಜಯಕುಮಾರ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ವ್ಯಾಪಾರಿಗಳಾದ ಚಿತ್ರಗಿ ಪ್ಲಾಟ್‌ ಭದ್ರಾಪುರ ಗ್ರಾಮದ ಉಮರ್‌ ಫಾರೂಕ್‌ ಮತ್ತು ಪಾಳಾ ಗ್ರಾಮದ ಮಹಮದ್‌ ಜಾಫರ್‌ ಖಾನ್‌ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಹಾವೇರಿ ನಗರದಲ್ಲಿ ಜನವರಿ 29ರಂದು ಶ್ರೀಕಂಠೇಶ್ವರ ಗೃಹೋಪಯೋಗಿ ಮಳಿಗೆಯ ಕಿಟಕಿ ಮುರಿದು ಒಟ್ಟು 4.59 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಮತ್ತು ನಗದನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದರು.

ಆರೋಪಿಗಳಿಂದ ಎರಡು ಟಿ.ವಿ, 8 ಮೊಬೈಲ್‌ ಫೋನ್‌, 1 ಮೈಕ್ರೋವೇವ್‌ ಮತ್ತು ಇತರೆ ಗೃಹೋಪಯೋಗಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಹಾನಗಲ್‌ ನಗರದಲ್ಲಿ ಕಳ್ಳತನ ಮಾಡಿದ್ದ ಬೈಕನ್ನು ಜಪ್ತಿ ಮಾಡಲಾಗಿದೆ. ಇನ್ನೂ ಎರಡು ಟಿ.ವಿ, 5 ಮೊಬೈಲ್‌ ಫೋನ್‌ಗಳನ್ನು ಜಪ್ತಿ ಮಾಡುವ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಹೇಳಿದರು.

ಸಿಪಿಐ ಪ್ರಭಾವತಿ ಸಿ.ಶೇತಸನದಿ, ಎಸ್‌ಐ ಪಿ.ಜಿ.ನಂದಿ, ಪ್ರೊಬೇಷನರಿ ಎಸ್‌ಐ ಚಂದನ್‌, ಎಎಸ್‌ಐ ಎಸ್‌.ಡಿ. ಸಾಗರ ಮತ್ತು ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ರೋಣ: ಪತ್ರಕರ್ತ ಇಟಗಿ ನಿಧನ

ಗದಗ: ಜಿಲ್ಲೆಯ ರೋಣದ ಹಿರಿಯ ಪತ್ರಕರ್ತ ಎ.ಡಿ. ಇಟಗಿ(62) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅಸ್ವಸ್ಥರಾಗಿದ್ದ ಅವರಿಗೆ…

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…

ಆಲಮಟ್ಟಿ ಬಳಿ ಬೈಕ್, ಬಸ್ ಡಿಕ್ಕಿ; ಇರ್ವರ ಸಾವು

ಆಲಮಟ್ಟಿ; ಬೈಕ್ ಹಾಗು ಖಾಸಗಿ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಾಣ…

ಕೋಮು ಸೌಹಾರ್ದತೆ ಮತ್ತು ಅಜ್ಜನವರು

ಕೋಮುವಾದ ಈಗ ಇದೊಂದು ವಿಚಿತ್ರ ಶಬ್ದ. ಸೌಹಾರ್ದತೆಯ ಹುಡುಕಾಟ ಅನಿವಾರ್ಯವಾದ ಕಾಲ.