ಹಾವೇರಿ: 40 ವರ್ಷದ ಕರೊನಾ ಸೋಂಕಿತ ವ್ಯಕ್ತಿ ಗುಣಮುಖವಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ಹಾವೆರಿ ಜಿಲ್ಲೆಯ ಜನತೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಪಿ-672 ಸೋಂಕಿತ ಗುಣಮುಖವಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಗುಲಾಬಿ ಹೂವು ಕೊಟ್ಟು, ಚಪ್ಪಾಳೆ ತಟ್ಟಿ ಗುಣಮುಖ ರೋಗಿಯನ್ನು ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂಧಿಗಳು ಬಿಳ್ಕೊಟ್ಟರು.

ಈ ವೇಳೆ ಡಿ.ಹೆಚ್.ಓ ಡಾ.ರಾಜೇಂದ್ರ ದೊಡ್ಡಮನಿ ನೇತೃತ್ವದಲ್ಲಿ ಬಿಳ್ಕೊಡಲಾಯಿತು. ಅಂಬ್ಯುಲೆನ್ಸ್ ನಲ್ಲಿ ಸವಣೂರು ಪಟ್ಟಣದ ನಿವಾಸಕ್ಕೆ ಜಿಲ್ಲಾಡಳಿತದ ವತಿಯಿಂದ ಕಳುಹಿಸಿಕೊಡಲಾಯಿತು. ಗುಣಮುಖ ಹೊಂದಿದ ವ್ಯಕ್ತಿ ಹದಿನಾಲ್ಕು ದಿನಗಳ ಕಾಲ ಹೋಮ್ ಕ್ವಾರೆಂಟೈನ್ ಆಗಲಿದ್ದಾರೆ.

ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರದ ನಿವಾಸಿ ಸಹೋದರನೊಂದಿಗೆ ಮಹಾರಾಷ್ಟ್ರದ ಮುಂಬೈಯಿಂದ ಅಕ್ರಮವಾಗಿ ಜಿಲ್ಲೆ ಪ್ರವೇಶ ಮಾಡಿದ್ದ ಎನ್ನಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಆರು ಕೊರೊನಾ ಕೇಸ್ ದಾಖಲಾಗಿವೆ. ಆರು ಕರೊನಾ ಸೋಂಕಿತರಲ್ಲಿ ಒಬ್ಬ ಬಿಡುಗಡೆ ಗೊಂದಿದಂತಾಗಿದೆ. ಉಳಿದ 5 ಕೇಸ್ ಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ��

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.

ಭಗೀರಥ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ

ಭಗೀರಥ ಸಂಘದ ತಾಲೂಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಮಾಜದ ಮುಖಂಡರು ಸಭೆ ಸೇರಿ ಪದಾಧಿಕಾರಿಗಳನ್ನು ನೇಮಕ ಮಾಡಿದರು.

ನಗರದಲ್ಲಿ ಮತ್ತೆ ಹಲವು ಪ್ರದೇಶಗಳು ಸೀಲ್ ಡೌನ್ ಪಟ್ಟಿಗೆ!

ಬೆಂಗಳೂರು : ನಗರದಲ್ಲಿ ಮಹಾಮಾರಿಯ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಹೆಚ್ಚಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ನಗರದ ಬಹುತೇಕ ಏರಿಯಾಗಳು ಸೀಲ್ಡೌಗನ್ ಆಗಲಿವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ