ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ಕೈಬಿಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದು, ಈ ನಡೆ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಸೋನಿಯಾ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ಮನವಿ ಮಾಡಿತ್ತು.

ಈ ಕುರಿತು ಪ್ರತಿಕ್ರಿಯಿಸಿದ್ದ ಬಿ.ಎಸ್.ವೈ. ಎಫ್.ಐ.ಆರ್. ಕೈಬಿಡುವ ಭರವಸೆಯನ್ನೂ ನೀಡಿದ್ದರು. ಆದರೆ ಇದರ ನಡುವೆ ಯಾವುದೇ ಕಾರಣಕ್ಕೂ ಎಫ್ ಐ ಆರ್ ಕೈಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಕೊರೋನಾ ವಿರುದ್ಧದ ಹೋರಾಟದಲ್ಲಿ ಹಣಕಾಸಿನ ಮುಗ್ಗಟ್ಟನ್ನು ನಿವಾರಿಸಲು ಹಾಗೂ ಕಾಯಿದೆಗಳಿಗೆ ತಿದ್ದುಪಡಿ ತರಲು ವಿಪಕ್ಷಗಳ ಸಹಕಾರ ಅಗತ್ಯ ಎಂಬ ಸಂಗತಿಯನ್ನು ಸಿಎಂ ಅರಿತಿದ್ದಾರೆ. ಎಪಿಎಂಸಿ ಕಾಯಿದೆ ತಿದ್ದುಪಡಿ, ಭೂ ಸುಧಾರಣೆ ವಿರುದ್ಧ ಈಗಾಗಲೇ ಕಾಂಗ್ರೆಸ್, ಜೆಡಿಎಸ್ ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಬಿಎಸ್ವೈಟ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದಾರೆ. ಆದರೆ ಸ್ವಪಕ್ಷೀಯರು ಅವರ ನಡೆಗೆ ಮುಳ್ಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಭಗೀರಥ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ

ಭಗೀರಥ ಸಂಘದ ತಾಲೂಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಮಾಜದ ಮುಖಂಡರು ಸಭೆ ಸೇರಿ ಪದಾಧಿಕಾರಿಗಳನ್ನು ನೇಮಕ ಮಾಡಿದರು.

ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯದ ಕೂಗು ಎತ್ತಿದ್ದು ನಿಜ- ಸಚಿವ ಉಮೇಶ್ ಕತ್ತಿ

ಆಲಮಟ್ಟಿ: ಉತ್ತರ ಕರ್ನಾಟಕದ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊ0ಡಾಗ ತಾವು ಸಹಜವಾಗಿಯೇ ಪ್ರತ್ಯೇಕ ರಾಜ್ಯದ ಕೂಗೆತ್ತಿರುವುದು…

9 ರಿಂದ 12ನೇ ತರಗತಿಗಳು ಸದ್ಯದಲ್ಲಿ ಆಗಲಿವೆ ಓಪನ್!

ಬೆಂಗಳೂರು : ಹೈಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವ ಸಿದ್ಧತೆ ರಾಜ್ಯದಲ್ಲಿ ನಡೆದಿದೆ. ಮುಂದಿನ ತಿಂಗಳಿನಿಂದ ಒಂಭತ್ತರಿಂದ 12ನೇ ತರಗತಿಯವರೆಗೆ ತರಗತಿಗಳನ್ನು ಆರಂಭಿಸಲು ಸದ್ಯ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಒಪ್ಪಿಗೆ ಸೂಚಿಸಿವೆ.

ಸತ್ತಲ್ಲಿ 20 ಜನರಿರಬೇಕು…ಮದ್ಯಕ್ಕೆ ಮಾತ್ರ ಸಾವಿರ ಜನರಿದ್ದರೂ ಸೈ!!

ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.