ಬೆಂಗಳೂರು: ಇಲ್ಲಿನ ಚಾಮರಾಜ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಹಿಂದೆ ಬ್ಯಾಂಕಿನ ಪಾಸ್ ಬುಕ್ ಮುಖಪುಟದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಎಂದು ಕನ್ನಡದಲ್ಲಿ ಮುದ್ರಿಸಿತ್ತು. ಆದರೆ ಇತ್ತೀಚೆಗೆ ಕನ್ನಡದಲ್ಲಿದ್ದ ಈ ಬರಹವನ್ನು ತೆಗೆದುಹಾಕಿದೆ. ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಉಳಿಸಿದೆ.
ಪ್ರಾದೇಶಿಕ ಭಾಷೆಯೊಂದಿಗೆ ಹಿಂದಿ ಕಲಿಸಬೇಕೆಂದು ಆದೇಶ ಇದ್ದಾಗಲೂ ಎಸ್.ಬಿ.ಐ ಪ್ರಾದೇಶಿಕ ಭಾಷೆಯನ್ನು ಮೂಲೆಗುಂಪು ಮಾಡಿದೆ. ಎಂದು ಕನ್ನಡ ಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ.
ಬ್ಯಾಂಕ್ ಗಳು ಕನ್ನಡದಲ್ಲೇ ವ್ಯವಹರಿಸಬೇಕು ಇಲ್ಲದಿದ್ದರೆ ಬ್ಯಾಂಕ್ ಎದುರು ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ್ ಆಗ್ರಹಿಸಿದ್ದಾರೆ.