ಕೇರಳ: ಗಡಿಯಿಂದ ರಾಜ್ಯಕ್ಕೆ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆ ಕಬಿನಿ ಹಿನ್ನೀರಿನ ಮೂಲಕ ಕೇರಳದಿಂದ ಜನರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಕೇರಳಾಗೆ ಕೂಲಿಗಾಗಿ ತೆರಳಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿ ಕೇರಳದಿಂದ ಕರ್ನಾಟಕ ಬರುತ್ತಿದ್ದಾರೆ. ಕೇರಳದಿಂದ ವಾಹನದಲ್ಲಿ ಕರೆದುಕೊಂಡು ಬಂದು ಗಡಿವರೆಗೂ ಬಿಟ್ಟು ಹೋಗತ್ತಿದ್ದು, ಆನೆಮಾಳ ಗ್ರಾಮ ನೆಟ್ಕಲ್ ಹುಂಡಿ ಒಡಕನ ಮಾಳ ಗ್ರಾಮದ ಮೂಲಕ ಕಳ್ಳದಾರಿಯಲ್ಲಿ ರಾಜ್ಯ ಪ್ರವೇಶಿಸುತ್ತಿದ್ದಾರೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೂಲಕ ಜನ ನದಿ ದಾಟುತ್ತಿದ್ದಾರೆ. ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ಕಳ್ಳ ಹಾದಿ ಹಿಡಿದವರಿಗೆ ಅನುಕೂಲವಾಗಿದೆ. ಈ ಮೂಲಕ ಚೆಕ್ ಪೋಸ್ಟ್ ಗಳಿಂದ ಕಾರ್ಮಿಕರು ತಪ್ಪಿಸಿಕೊಂಡು ಬರುತ್ತಿದ್ದಾರೆ.

ಚೆಕ್ ಪೋಸ್ಟ್ ಗಳ ಮೂಲಕ ಬಂದ್ರೆ ತಪಾಸಣೆ ವೇಳೆ ಸಿಕ್ಕಿಬೀಳುವ ಆತಂಕದಿಂದ ಆರೋಗ್ಯ ತಪಾಸಣೆ ಇಲ್ಲದೆ ಹೊರ ರಾಜ್ಯಗಳಿಂದ ಅಕ್ರಮವಾಗಿ ನುಸುಳುತ್ತಿದ್ದಾರೆ. ಜನರ ಈ ಮನಸ್ಥಿತಿಯೂ ಕೊರೋನಾ ಸೋಂಕು ವ್ಯಾಪಕವಾಗಲು ಕಾರಣವಾಗಲಿದೆ. ಈ ರೀತಿ ಜನರು ಅಕ್ರಮವಾಗಿ ನುಸುಳುತ್ತಿರುವುದರಿಂದ ಸುತ್ತಮುತ್ತ ಇರುವ 13 ಹಾಡಿ ಜನಕ್ಕೆ ಆತಂಕ ಶುರುವಾಗಿದೆ.

Leave a Reply

Your email address will not be published. Required fields are marked *

You May Also Like

ತಿರುಪತಿ ತಿಮ್ಮಪ್ಪನ ದರ್ಶನ ಯಾವಾಗ?

ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಅಲ್ವಿದಾ ನಿಸಾರ್ ಚಾಚಾ ಎನ್ನಲು ಮನಸಾಗುತ್ತಿಲ್ಲ..!

ಅಲ್ವಿದಾ ನಿಸಾರ್ ಅಹ್ಮದ್ ಚಾಚಾ. ನಿಮ್ಮ ಪದ್ಯಗಳ ಸಂತೆಯಲ್ಲಿ ನಾವು ನಿತ್ಯ ಕಳೆದುಹೋಗುತ್ತೇವೆ. ನರಸಿಂಹರಾಜ ಕಾಲೋನಿಯ ದ್ವಾರಕಾ ಹೋಟೆಲ್ ಮುಂದೆ ನೀವು ಅಂದು ನಿಂತಿದ್ದ ಜಾಗದಲ್ಲೇ ನಿಂತಿರುತ್ತೀರಿ ಎಂದು ಭಾವಿಸುತ್ತೇನೆ. ಹೋಗಿ ಬನ್ನಿ.

ಲಾಕ್ ಡೌನ್ ಫ್ಲಾಪ್:ಸೋಂಕು ಸೊರಗಲಿಲ್ಲ, ಎಕಾನಮಿ ಏಳಲಿಲ್ಲ!

ಬೆಂಗಳೂರು: ಲಾಕ್ ಡೌನ್ ಉದ್ದೇಶ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವುದು. ವಾಣಿಜ್ಯ ಸೇರಿದಂತೆ ಎಲ್ಲ ಆರ್ಥಿಕ ಚಟುವಟಿಕೆಗಳು…

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .