ಉಡುಪಿ: ಈಗ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಮಾಡುವ ಪರಿಸ್ಥಿತಿ ಇಲ್ಲ. ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಎಲ್ಲವನ್ನು ಎಲ್ಲರನ್ನು ಕೇಳಿ ತೀರ್ಮಾನ ಕೈಗೊಳ್ಳಲು ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಸಮಿತಿ ರಚನೆ ಮಾಡುವ ಬಗ್ಗೆ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿದೆ. ಕಾಂಗ್ರೆಸ್ ನವರು ಕೂಡಾ ಸರ್ಕಾರ ನಡೆಸಿದ್ದಾರೆ. ಜನರಿಗೆ ಸಮಸ್ಯೆಯಾಗದ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವುದು ಅವರಿಗೂ ಗೊತ್ತಿದೆ. ರಾಜ್ಯದಲ್ಲಿ ಕೆಲವು ಪಂಚಾಯತಿಗೆ ಡಿಸೆಂಬರ್ ವರೆಗೆ ಅವಧಿ ಇದೆ. ಅವಧಿ ಮುಗಿದ ಪಂಚಾಯತಿಗೆ ಜಿಲ್ಲಾಧಿಕಾರಿಗಳು ಸಮಿತಿ ನೇಮಕ ಮಾಡುತ್ತಾರೆ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.