ದೆಹಲಿ: ಲಾಕ್ ಡೌನ್ ತೆರವಿನಿಂದಾಗಿ ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದರು.

ದೆಹಲಿಯಲ್ಲಿ ಕೊರೊನಾ ಕುರಿತು ಮಾತಾಡಿದ ಅವರು, ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ, ಸಾವಿನ ಸಂಖ್ಯೆ ಮತ್ತು ಗಂಭೀರ ಪ್ರಕರಣಗಳು ತೀವ್ರಗತಿಯಲ್ಲಿ ಏರಿಲ್ಲ. ಆದ್ದರಿಂದ ಚಿಂತೆಗೀಡಾಗಬೇಕಾದ ಅಗತ್ಯವಿಲ್ಲ. ಕೊರೊನಾ ಪೀಡಿತರು ಚಿಕಿತ್ಸೆಯಿಂದ ಗುಣವಾದ ನಂತರ ಚಿಂತಿಸಬೇಕಿಲ್ಲ ಎಂದರು.
ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇದರ ನಡುವೆ ಕೂಡ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಹುತೇಕ ಪ್ರಕರಣಗಳು ಗಂಭೀರವಲ್ಲದ ಅಥವಾ ಮನೆಯಲ್ಲೇ ಚಿಕಿತ್ಸೆ ನೀಡಬಹುದಾದ ಪ್ರಕರಣಗಳು ಎಂದರು.
ಕೊರೊನಾ ಸಮಯದಲ್ಲಿ, ಕೊರೊನಾ ಪಾಸಿಟಿವ್ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆಗಳಿಗೆ ಶೋಕಾಸ್ ನೊಟೀಸ್ ನೀಡಿದ್ದೇವೆ. ಇಂತಹ ಸಮಯದಲ್ಲಿ ಚಿಕಿತ್ಸೆ ನೀಡುವುದು ಆಸ್ಪತ್ರೆಗಳ ಜವಾಬ್ದಾರಿ. ರೋಗಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಿ, ಅವರಿಗೆ ಕೊರೊನಾ ಆಸ್ಪತ್ರೆಗೆ ತಲುಪಿಸುವುದು ಕೂಡ ಆಸ್ಪತ್ರೆಯ ಜವಾಬ್ದಾರಿ ಎಂದರು.
ನಿನ್ನೆಯವರೆಗೆ ದೆಹಲಿಲ್ಲಿ 13,418 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ 6,540 ಜನ ಗುಣಮುಖರಾಗಿದ್ದಾರೆ. 6,617 ಸಕ್ರಿಯ ಪ್ರಕರಣಗಳಿವೆ ಎಂದು ಅವರು ಮಾಹಿತಿ ನೀಡಿದರು.
ಇಂದಿನಿಂದ 2,000 ಹೊಸ ಬೆಡ್ ಗಳ ವ್ಯವಸ್ಥೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಇಲ್ಲಿ ರೋಗಿಗಳಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. 3,314 ಜನರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 32ನೇ ವಾರ್ಡ ಬಿಜೆಪಿ ಪಾಲಿಗೆ

ನಗರ ಸಭೆ ಚುನಾವಣೆ: 32ನೇ ವಾರ್ಡ ಬಿಜೆಪಿ ಪಾಲಿಗೆ ಗದಗ ಬೇಟಗೇರಿ:ನಗರ ಸಭೆ 31ನೇ ವಾರ್ಡನ…

ಕೊರೊನಾ ಜಾಗೃತಿ ಬಗ್ಗೆ ಮಹಿಳೆಯೊಬ್ಬಳ ಮಾತುಗಳನ್ನು ನೀವೊಮ್ಮೆ ಕೇಳಲೇಬೇಕು..!

ಕೊರೊನಾದ ಅನುಭವ ಮಹಿಳೆಯೊಬ್ಬರ ಬಾಯಲ್ಲಿ ಕೇಳಿ.ಮಹಿಳೆಯೊಬ್ಬರು ಕೊರೊನಾದ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ…

ಕೋಲಾರದ ಸುತ್ತಮುತ್ತ ಆವರಿಸಿದೆ ಕೊರೊನಾ!

ಲಾಕ್ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದಾಗಿ ಜಿಲ್ಲೆಯ ಜನರದಲ್ಲಿ ಆತಂಕ ಮನೆ ಮಾಡಿದ್ದು, ಇಲ್ಲಿ ಕೂಡ ಕೊರೊನಾ ಭಯ ಕಾಡುತ್ತಿದೆ.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…