ದೆಹಲಿ: ಲಾಕ್ ಡೌನ್ ತೆರವಿನಿಂದಾಗಿ ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದರು.

ದೆಹಲಿಯಲ್ಲಿ ಕೊರೊನಾ ಕುರಿತು ಮಾತಾಡಿದ ಅವರು, ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ, ಸಾವಿನ ಸಂಖ್ಯೆ ಮತ್ತು ಗಂಭೀರ ಪ್ರಕರಣಗಳು ತೀವ್ರಗತಿಯಲ್ಲಿ ಏರಿಲ್ಲ. ಆದ್ದರಿಂದ ಚಿಂತೆಗೀಡಾಗಬೇಕಾದ ಅಗತ್ಯವಿಲ್ಲ. ಕೊರೊನಾ ಪೀಡಿತರು ಚಿಕಿತ್ಸೆಯಿಂದ ಗುಣವಾದ ನಂತರ ಚಿಂತಿಸಬೇಕಿಲ್ಲ ಎಂದರು.
ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇದರ ನಡುವೆ ಕೂಡ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಹುತೇಕ ಪ್ರಕರಣಗಳು ಗಂಭೀರವಲ್ಲದ ಅಥವಾ ಮನೆಯಲ್ಲೇ ಚಿಕಿತ್ಸೆ ನೀಡಬಹುದಾದ ಪ್ರಕರಣಗಳು ಎಂದರು.
ಕೊರೊನಾ ಸಮಯದಲ್ಲಿ, ಕೊರೊನಾ ಪಾಸಿಟಿವ್ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆಗಳಿಗೆ ಶೋಕಾಸ್ ನೊಟೀಸ್ ನೀಡಿದ್ದೇವೆ. ಇಂತಹ ಸಮಯದಲ್ಲಿ ಚಿಕಿತ್ಸೆ ನೀಡುವುದು ಆಸ್ಪತ್ರೆಗಳ ಜವಾಬ್ದಾರಿ. ರೋಗಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಿ, ಅವರಿಗೆ ಕೊರೊನಾ ಆಸ್ಪತ್ರೆಗೆ ತಲುಪಿಸುವುದು ಕೂಡ ಆಸ್ಪತ್ರೆಯ ಜವಾಬ್ದಾರಿ ಎಂದರು.
ನಿನ್ನೆಯವರೆಗೆ ದೆಹಲಿಲ್ಲಿ 13,418 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ 6,540 ಜನ ಗುಣಮುಖರಾಗಿದ್ದಾರೆ. 6,617 ಸಕ್ರಿಯ ಪ್ರಕರಣಗಳಿವೆ ಎಂದು ಅವರು ಮಾಹಿತಿ ನೀಡಿದರು.
ಇಂದಿನಿಂದ 2,000 ಹೊಸ ಬೆಡ್ ಗಳ ವ್ಯವಸ್ಥೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಇಲ್ಲಿ ರೋಗಿಗಳಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. 3,314 ಜನರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *

You May Also Like

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಗ್ರಾಪಂ ಚುನಾವಣೆ ಯಾವಾಗ ನಡೆಯಲಿವೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಖಾಸಗಿ ಶಾಲಾ ಶಿಕ್ಷಕ ಆತ್ಮಹತ್ಯಗೆ ಯತ್ನ

ತಾಲೂಕಿನ ಡಿ ಪೌಲ್ ಅಕ್ಯಾಡಮಿ ಶಾಲೆಯ ಶಿಕ್ಷಕನರ‍್ವ ಕೆಲಸದಿಂದ ವಜಾಗೊಳಿಸಿದ ಕಾರಣ ಮನನೊಂದು ಆತ್ಮ ಹತ್ಯೆಕ್ಕೆ ಯತ್ನಿಸಿದ ಘಟನೆ ನಡೆದಿದೆ.