ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ FRSH ಹೆಸರಿನ ವೈಯಕ್ತಿಕ ಸೌಂದರ್ಯ ಬ್ರಾಂಡ್ ಬಿಡುಗಡೆ ಮಾಡಿದ್ದಾರೆ. ವೈಯಕ್ತಿಕ ಉಡುಪು, ದೇಹದಾರ್ಡ್ಯ ಸಲಕರಣೆ, ಜಿಮ್ ಮತ್ತು ಈ-ಸೈಕಲ್ ಬಿಡುಗಡೆಯ ನಂತರ ಇದೀಗ ಹೊಸ ಬ್ರಾಂಡ್ ಪರಿಚಯಿಸಿದ್ದಾರೆ. ಸೆಲೆಬ್ರಿಟಿಗಳ ಸೌಂದರ್ಯ ವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಈ ಬ್ರಾಂಡ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

ತಮ್ಮ ಬ್ರಾಂಡ್ ಗಳನ್ನು ಯೋಜಿತ ಮಾರುಕಟ್ಟೆಗೆ ಪರಿಚಯಿಸುವ ಕೆಲಸವನ್ನು ಸಲ್ಮಾನ್ ಖಾನ್ ಕೆಲವು ದಿನಗಳಿಂದ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಆರೋಗ್ಯಕರ ಜೀವನಶೈಲಿಯ ಕುರಿತು ಜನರಲ್ಲಿ ತಿಳಿವಳಿಕೆ ಮೂಡಿಸುತ್ತಿದ್ದಾರೆ.

ಇದಕ್ಕೂ ಮುನ್ನ ಅವರು ಯಶಸ್ವಿ ಉದ್ಯಮಿಯಾಗಿ ಕೂಡ ಗುರುತಿಸಿಕೊಂಡಿದ್ದಾರೆ. ಇದೀಗ FRSH ಅಡಿಯಲ್ಲಿ ಹ್ಯಾಂಡ್ ಸ್ಯಾನಿಟೈಜರ್ ಅನ್ನು ಮೊಟ್ಟಮೊದಲ ಉತ್ಪನ್ನವಾಗಿ ಬಿಡುಗಡೆ ಮಾಡಿದ್ದಾರೆ. ಇದು ಸದ್ಯಕ್ಕೆ ದೈನಂದಿನ ಅಗತ್ಯ ವಸ್ತುವಾಗಿ ಬದಲಾಗಿದೆ.  

FRSH ಬ್ರಾಂಡ್ ಅನ್ನು ಕಳೆದ ಕೆಲವು ವರ್ಷಗಳಿಂದ ಪರಿಣತರ ತಂಡ ರೂಪಿಸಿದೆ. ಇದೀಗ ಎಲ್ಲ ಪ್ರಯೋಗಗಳ ನಂತರ ಕೆಲವು ತಿಂಗಳುಗಳ ಅಂತರದಲ್ಲಿ ಮಾರುಕಟ್ಟೆಗೆ ಈ ಬ್ರಾಂಡ್ ಗಳು ಬಿಡುಗಡೆಯಾಗಲು ವೇದಿಕೆ ಸಿದ್ಧವಾಗಿದೆ. ಇವು ಸೌಂದರ್ಯ ವರ್ಧಕಗಳಾಗಿದ್ದು, ಕೆಲವೇ ದಿನಗಳಲ್ಲಿ ಜನರ ಕೈ ಸೇರಲಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಲ್ಮಾನ್ ಖಾನ್, ಕೈಗೆಟುಕುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಜನರಿಗೆ ನೀಡಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಇದರ ಭಾಗವಾಗಿ FRSH ಕಾರ್ಯರೂಪಕ್ಕೆ ಬರುತ್ತಿದೆ. ಇದರ ಅಡಿಯಲ್ಲಿ ಮೊದಲ ಉತ್ಪನ್ನವಾಗಿ ಸ್ಯಾನಿಟೈಜರ್ಗಳನ್ನು ಪರಿಚಯಿಸಲಾಗುತ್ತಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಇನ್ನಷ್ಟು ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತೇವೆ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ…

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ!

ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢವಾಗಿದೆ. ಪಿ-1307 ಕೇಸ್ ಪತ್ತೆಯಾಗಿದ್ದು 49 ವರ್ಷದ ಮಹಿಳೆ ಮುಂಬೈನಿಂದ ಇತ್ತಿಚೆಗಷ್ಟೆ ಬಂದಿದ್ದಳು ಎನ್ನಲಾಗಿದ್ದು

ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಹಳೆ ಗಾಯ ಇನ್ನೂ ಮಾಸಿಲ್ಲ. ಈಗ ಮತ್ತೆ ನಾಡಿನ ಜನರಿಗೆ ಜಲಾಘಾತ ಒಕ್ಕರಿಸಿದೆ. ಜಲಸ್ಫೋಟಕ್ಕೆ ಉತ್ತರ ಕರ್ನಾಟಕದ ಹಲವು ಗ್ರಾಮಗಳ ಸಾವಿರಾರೂ ಎಕರೆ ಬೆಳೆ ಜೊತೆಗೆ ಅವರ ಬದುಕು ಮತ್ತೆ ನೀರು ಪಾಲಾಗಿದೆ. ರಕ್ಕಸ ಪ್ರವಾಹಕ್ಕೆ ಎಲ್ಲವೂ ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಜನರ ಕಥೆ ಕೇಳಿದಾಗ ಕರಳು ಕಿತ್ತು ಬರುತ್ತೆ. ಮನೆಯ ಬಾಗಿಲಿಗೆ ಮತ್ತೆ ನದಿಗಳು ಭೇಟಿ ನೀಡಿವೆ. ಬದುಕನ್ನೇ ನಲುಗಿಸಿಬಿಟ್ಟಿವೆ. ರಸ್ತೆ, ಹೊಲ ಗದ್ದೆ, ಮನೆ ಮಠಗಳು ನೀರು ಪಾಲಾಗುತ್ತಿವೆ.

ಊರಳಿಯನಿಂದ ಬಂತು ಸೋಂಕು: ಆರ್.ಎಂ.ಪಿ ಡಾಕ್ಟರ್ ನಿಂದ ಸುತ್ತಲಿನ ಗ್ರಾಮಸ್ಥರಿಗೆ ಆತಂಕ..!

ಗದಗ: ಊರಳಿಯ ಮಾವನ ಮನೆಗೆ ಬಂದಿದ್ದಾನೆ. ಆದರೆ ಆತನಿಗೆ ಸೋಂಕು ತಗುಲಿರುವುದು ಸ್ವತ: ಆತನಿಗೂ ಗೊತ್ತಿರಲಿಲ್ಲ.…