ಬೆಂಗಳೂರು: ಕೊನೆಗೂ ಪ್ರಯಾಣಿಕರ ಮನವಿಗೆ ಸ್ಪಂದಿಸಿದ ಬಿಎಂಟಿಸಿ ಪಾಸ್ ದರವನ್ನು ಇಳಿಕೆಗೆ ಮುಂದಾಗಿದೆ. ನಾಳೆಯಿಂದಲೇ ಹೊಸ ದರ ಅನ್ವಯವಾಗಲಿದೆ. ಹೀಗಾಗಿ ನಿತ್ಯ ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗಳನ್ನೆ ನೆಚ್ಚಿಕೊಂಡಿದ್ದ ಲಕ್ಷಾಂತರ ಜನರಿಗೆ ಇಂದು ಬಿಎಂಟಿಸಿ ಸಿಹಿ ಸುದ್ದಿ ನಿಡಿದೆ.

70ರೂ ಇದ್ದ ನಿತ್ಯದ ಪಾಸ್ ದರ 50ರೂಗೆ ಇಳಿಕೆ ಮಾಡಿದೆ. ಇದರ ಜೊತೆಗೆ ಹೊಸದಾಗಿ 5ರೂ, 10ರೂ, 15ರೂ ಹಾಗೂ 20ರೂ ಮತ್ತು 30ರೂಪಾಯಿಗೆ ಪಾಸ್ ನೀಡಲು ಬಿಎಂಟಿಸಿ ಮುಂದಾಗಿದೆ. ಈ ಮೂಲಕ ಟಿಕೆಟ್ ಬದಲಾಗಿ ಪಾಸ್ ವಿತರಣೆ ಮಾಡಲು ಬಿಎಂಟಿಸಿ ಮುಂದಾಗಿದೆ. 

ಈಗಾಗಲೇ ನಿತ್ಯ ಪಾಸಿನ ದರ 70 ರೂಪಾಯಿ ಪ್ರಯಾಣಿಕರಿಗೆ ಹೊರೆಯಾಗಿತ್ತು. ಇದರಿಂದ ಪ್ರಯಾಣಿಕರು ದರ ಇಳಿಕೆಗೆ ಸಾಕಷ್ಟು ಬಾರಿ ಒತ್ತಾಯಿಸಿದ್ದರು. ಕೊನೆಗೂ ಪ್ರಯಾನಿಕರ ಮನವಿಗೆ ಸ್ಪಂದಿಸಿದ ಬಿಎಂಟಿಸಿ ಈ ನಿರ್ಧಾರಕ್ಕೆ ಬಂದಿದೆ. ಇಲಾಖೆಯ ಈ ನಿರ್ಧಾರ ಕೇವಲ ಬೆಂಗಳೂರಿಗರಿಗಷ್ಟೆ ಅಲ್ಲ, ಅನ್ಯ ಕಾರ್ಯದ ಮೇಲೆ ನಿತ್ಯ ಬೆಂಗಳೂರಿಗೆ ಬರುವ ಲಕ್ಷಾಂತರ ಜನರಿಗೆ ಉಪಯೋಗವಾಗಿದೆ.

ಇಟಿಎಂ ಯಂತ್ರದ ಮೂಲಕ ಪಾಸ್ ವಿತರಣೆ ಮಾಡಲಾಗುವುದು ಜೊತೆಗೆ ಪ್ರಯಾಣದ ದೂರ ಆಧರಿಸಿ ಪಾಸ್ ದರ ನಿಗದಿ ಮಾಡಲಾಗಿದೆ. ಒಟ್ಟು 5 ಮಾದರಿಯ ದರ ನಿಗದಿ ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಒಂದು ವೇಳೆ ಪಾಸ್ ಖರೀದಿ ಮಾಡಲು ಆಗದವರು ಟಿಕೆಟ್ ಕೊಂಡು ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.

Leave a Reply

Your email address will not be published. Required fields are marked *

You May Also Like

21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಸಿಹಿ ಸುದ್ದಿ

ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.

ರಾಜ್ಯಸಭೆಯತ್ತ ಎಚ್.ವಿಶ್ವನಾಥ್ ಚಿತ್ತ..?

ಇತ್ತಿಚಿನ ಬೆಳವಣಿಗೆಯನ್ನು ನೋಡಿದರೆ ವಿಶ್ವನಾಥ್ ಚಿತ್ತ ರಾಜ್ಯಸಭೆಯತ್ತ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲ್ಲ ಕಾರಣಗಳಿಂದ ಶಿಘ್ರದಲ್ಲಿ ಬರಲಿರುವ ರಾಜ್ಯಸಭೆ ಚುನಾವಣೆಗೆ ಇನ್ನಷ್ಟು ಮಹತ್ವ ಬಂದಿದೆ

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.

ಮಹಾಮಾರಿಗೆ ಬಾಗಲಕೋಟೆಯಲ್ಲಿ ಬಲಿ

ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.…