ಬೆಂಗಳೂರು:ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ನಮ್ಮ ಕೊರೋನಾ ಯೋಧರ ಪರಿಶ್ರಮಕ್ಕೆ ಹೆಮ್ಮೆಯ ಅನುಮೋದನೆ ದೊರೆಕಿದೆ. ಕೋವಿಡ್19ನ್ನು ಪರಿಣಾಮಕಾರಿ ನಿರ್ವಹಣೆಗಾಗಿ 4 ಮಾದರಿ ನಗರಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಇದರಲ್ಲಿ ನಮ್ಮ ಬೆಂಗಳೂರು ನಗರ ಕೂಡ ಒಂದಾಗಿದೆ. ಈ ನಿಟ್ಟಿನಲ್ಲಿ ಉತ್ತಮ ಸೇವೆಯನ್ನು ಮುಂದುವರೆಸೋಣ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.