ಕೊಲ್ಲಂ: ವ್ಯಕ್ತಿಯೊಬ್ಬ ತನ್ನ ಪತ್ನಿ ಮಲಗಿದ್ದಾಗ ನಾಗರಹಾವು ಬಿಟ್ಟು ಹತ್ಯೆ ಮಾಡಿದ ಭಯಾನಕ ಘಟನೆ ಕೇರಳದಲ್ಲಿ ನಡೆದಿದೆ. ಅಂಚಲ್ ನಿವಾಸಿ ಎಸ್.ಉತ್ತರ ಎಂಬ 25 ವರ್ಷದ ಮಹಿಳೆ ಹಾವು ಕಚ್ಚಿ ಸಾವನ್ನಪ್ಪಿದ್ದಾಳೆ. ಆದರೆ ಮಹಿಳೆ ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಆಕೆಯ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಪತ್ನಿಯನ್ನು ಕೊಲೆ ಮಾಡಿದ ಪತಿ ಸೂರಜ್ ನನ್ನು ಬಂಧಿಸಿದ್ದಾರೆ. ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಸೂರಜ್ ರೂ.10 ಸಾವಿರ ನೀಡಿ ಹಾವಾಡಿಗ ಸುರೇಶ್ ನಿಂದ ಹಾವನ್ನು ತರಿಸಿದ್ದ. ಬಳಿಕ ತನ್ನ ರೂಮ್ ನಲ್ಲಿ ಹಾವನ್ನು ಬಿಟ್ಟು ಪತ್ನಿಗೆ ಕಚ್ಚುವಂತೆ ಮಾಡಿದ್ದ. ಮೊದಲ ಬಾರಿಗೆ ಹಾವು ಕಚ್ಚಿದಾಗಲೇ ಪತ್ನಿ ಸಾಯುತ್ತಾಳೆ ಎಂದು ಸೂರಜ್ ಅಂದುಕೊಂಡಿದ್ದ. ಆದರೆ ಅದೃಷ್ಟವಶಾತ್ ಉತ್ತರ ಬದುಕುಳಿದಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖಳಾಗಿ ತವರು ಮನೆಗೆ ತೆರಳಿದ್ದಳು. ಆದರೆ ಎರಡನೇ ಬಾರಿ ಸುರೇಶ್ ನಿಂದ ಹಾವನ್ನು ಬಾಡಿಗೆ ಪಡೆದು ಪತ್ನಿ ಮಲಗಿದ್ದಾಗ ಅದನ್ನು ಬಿಟ್ಟಿದ್ದಾನೆ. ಎರಡನೇ ಬಾರಿ ಹಾವು ಕಚ್ಚಿದ್ದರಿಂದ ಪತ್ನಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಳಿಯ ಸೂರಜ್ ವರದಕ್ಷಿಣೆಗಾಗಿ ನಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಮಯದಲ್ಲಿ ನೀಡಿದ್ದ ಕೆಲವು ಆಭರಣಗಳು ಲಾಕರ್ ನಿಂದ ಕಾಣೆಯಾಗಿವೆ ಎಂದು ಸಹ ಪೋಷಕರು ದೂರಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ರಾಜಧಾನಿಯಲ್ಲಿ ಮತ್ತೆ ಇಬ್ಬರು ಗರ್ಭಿಣಿಯರಲ್ಲಿ ಕಂಡು ಬಂದ ಮಹಾಮಾರಿ!

ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಮತ್ತೆ ಇಬ್ಬರು ಗರ್ಭಿಣಿಯರಿಗೆ ಕೊರೊನಾ ಸೋಂಕು ಕಂಡು ಬಂದಿದೆ.

ಬುಲ್ಲಿ ಬಾಯಿ’ ಆ್ಯಪ್‌ನ ಮಾಸ್ಟರ್ ಮೈಂಡ್ ನೀರಜ್ ಬಿಷ್ಣೋಯ್ ಆತ್ಮಹತ್ಯೆಗೆ ಯತ್ನ

ನವದೆಹಲಿ: ಬುಲ್ಲಿ ಬಾಯಿ ಆಪ್‌ನ ಮಾಸ್ಟರ್ ಮೈಂಡ್ ನೀರಜ್ ಬಿಷ್ಣೋಯ್ ಸದ್ಯ ದೆಹಲಿ ಪೊಲೀಸರ ವಶದಲ್ಲಿದ್ದಾರೆ.…

ಕಟ್ಟಿ ಹಾಕಿದ್ದ ಕೇರಳಕ್ಕೆ ಸವಾಲು ಹಾಕಿದ ಮಹಾಮಾರಿ!

ಕೊಚ್ಚಿ : ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಕೆಲವು ದಿನಗಳಿಂದ ಮಹಾಮಾರಿ ಕಟ್ಟಿ ಹಾಕಲಾಗಿತ್ತು. ಆದರೆ, ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆಯಾಗಿದ್ದಾರೆ.

ಕೊರೊನಾ ಭಯ – ಹಲವೆಡೆ ಸ್ವಯಂ ಪ್ರೇರಿತ ಬಂದ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಹಲವಡೆ ಸ್ವಯಂ…