ಬೆಂಗಳೂರು: ಮೂರು ದಿನಗಳ ಹಿಂದೆ ಬೆಂಗಳೂರು ಖಾಲಿ ಮಾಡಿದ್ದ ಜನ ಇದೀಗ ಮತ್ತೆ ರಾಜಧಾನಿಯತ್ತ ಮುಖ ಮಾಡಿದ್ದಾರೆ.

ಹೀಗಾಗಿ ಸಂಜೆಯಿಂದ ತುಮಕೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಜೆ 7 ಗಂಟೆಯ ಒಳಗಡೆ ಮನೆ ಸೇರಬೇಕಾದ ಹಿನ್ನೆಲೆಯಲ್ಲಿ ನೆಲಮಂಗಲ ಟೋಲ್ ಬಳಿ ಕಿಲೋಮೀಟರ್‌ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇನ್ನೊಂದು ಕಡೆ ಉತ್ತರ ಭಾರತ ಕಾರ್ಮಿಕರು ಬೆಂಗಳೂರು ಬಿಟ್ಟು ದೊಡ್ಡ ಸಂಖ್ಯೆಯಲ್ಲಿ ತಮ್ಮೂರುಗಳಿಗೆ ತೆರಳುವುದು ಮುಂದುವರಿದಿದೆ.

ಇವತ್ತು ಕೂಡ ಮಿಜೋರಾಂ, ಒಡಿಶಾ ರಾಜ್ಯಗಳಿಗೆ ತೆರಳಲು ಸಾವಿರಾರು ಕಾರ್ಮಿಕರು ಅರಮನೆ ಮೈದಾನದಲ್ಲಿ ಜಮಾಯಿಸಿದ್ರು. ಯಾರೂ ಸಾಮಾಜಿಕ ಅಂತರ ಪಾಲಿಸಿದ್ದು ಕಂಡು ಬರಲಿಲ್ಲ. ಎಲ್ಲರೂ ರೈಲು ಹತ್ತಲು ಅವಕಾಶ ಸಿಕ್ಕಿದರೆ ಸಾಕು ಅಂತಾ ನೋಂದಣಿ ಮಾಡಿಸಿಕೊಳ್ಳಲು ಮುಗಿಬಿದ್ದಿದ್ದರು.

Leave a Reply

Your email address will not be published. Required fields are marked *

You May Also Like

ಭಾವನೆಗಳ ರಸಕಾವ್ಯಕ್ಕೆ ಚಿತ್ರಕಲೆ ಸ್ಪೂರ್ತಿ- ಉಮೇಶ ಶಿರಹಟ್ಟಿಮಠ ಅಭಿಮತ

ಚಿತ್ರ ಬರಹ : ಗುಲಾಬಚಂದ ಜಾಧವವಿಜಯಪುರ : ಚಿತ್ರಕಲೆ ನಮ್ಮ ಸಂಸ್ಕೃತಿಗಳ ಜೀವನಾಡಿ.ಅದು ಜೀವನದ ಒಂದು…

ಗದಗ ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ : ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು?

ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಒಟ್ಟು 10241 ಪ್ರಕರಣಗಳು ಪತ್ತೆಯಾದಂತಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 87677 ಆಗಿದೆ.

ಕೋರೊನಾ ನಿರ್ವಹಣೆ ಸರಿಯಾಗಿದೆ, ಆತಂಕ ಬೇಡ: ಸಚಿವ ಸಿ.ಸಿ. ಪಾಟೀಲ್

ಕೋರೊನಾ ನಿವ೯ಹಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸಕಾ೯ರ ಹಾಗೂ ಜಿಲ್ಲಾಡಳಿತ ಸಮಥ೯ವಾಗಿವೆ. ಯಾವುದೆ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಲಾಕ್ ಡೌನ್ : ಸೀಜ್ ಆದ ವಾಹನ ಮಾಲಿಕರಿಗೆ ಸಿಹಿ ಸುದ್ದಿ

ಈಗಾಗಲೇ ದೇಶಾದ್ಯಂತ ಮಾ.24 ರಿಂದಲೇ ಲಾಕ್ ಡೌನ್ ಆರಂಭವಾಗಿದೆ. ಪೊಲೀಸರು ವಶಪಡಿಸಿಕೊಂಡ ವಾಹನಗಳನ್ನು ಮೇ.1 ರಂದು ಮಾಲಿಕರಿಗೆ ಮರಳಿ ನೀಡುವ ಬಗ್ಗೆ ನಿರ್ಧರಿಸಲಾಗಿದೆ.