ಶಿಮ್ಲಾ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಿಮಾಚಲ ಪ್ರದೇಶದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ನ್ನು ವಿಸ್ತರಿಸಲಾಗಿದೆ.
ಈ ಕುರಿತು ಅಲ್ಲಿನ ಸಿಎಂ ಜೈ ರಾಮ್ ಠಾಕೂರ್ ಹೇಳಿದ್ದಾರೆ. ಜೂನ್‌ 30ರವರೆಗೂ 12 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮುಂದುವರೆಯಲಿದೆ ಎಂದಿದ್ದಾರೆ. ಹಿಮಾಚಲ ಪ್ರದೇಶದಲ್ಲಿ 214 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 63 ಸೋಂಕಿತರು ಗುಣಮುಖರಾಗಿದ್ದರೆ, ಐದು ಜನ ಸಾವನ್ನಪ್ಪಿದ್ದಾರೆ. ಹಮ್ರೀಪುರ್‌ ಜಿಲ್ಲೆಯಲ್ಲಿ ಹಿಮಾಚಲ ಪ್ರದೇಶದ ನಾಲ್ಕನೇ ಒಂದು ಭಾಗದಷ್ಟು ಸೋಂಕಿತರು ಪತ್ತೆಯಾಗಿದ್ದಾರೆ.
ಮೇ. 31ರ ವರೆಗೆ ದೇಶವ್ಯಾಪಿ ಲಾಕ್‌ಡೌನ್‌ ಜಾರಿಯಲ್ಲಿದೆ. ಮಾ. 25 ರಿಂದ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಲಾಕ್‌ಡೌನ್‌ ಈಗಾಗಲೇ 3 ಬಾರಿ ವಿಸ್ತರಣೆಯಾಗಿದ್ದು, ಈ 31ಕ್ಕೆ ಸಂಪೂರ್ಣ ಲಾಕ್‌ಡೌನ್‌ ಅಂತ್ಯಗೊಳಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ಹಾನಗಲ್ ಬೈ ಎಲಕ್ಷನ್ ನಲ್ಲಿ ಕಾಂಗ್ರಸ್ ಗೆ ಜಯ

ಹಾನಗಲ್: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 7598 ಮತಗಳ ಅಂತರದಿಂದ ಗೆಲುವು.ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ…

ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ!

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ವಿಜಯಪುರ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ದ್ರಾಕ್ಷಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ.

ಲಕ್ಷ್ಮೇಶ್ವರದಲ್ಲಿ : ನಿಯಮ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಕೊರೋನಾ ಎರಡನೇ ಅಲೆ ಅತೀ ವೇಗವಾಗಿ ಹರಡುತ್ತಿರುವುದರಿಂದ ಶನಿವಾರ, ಭಾನುವಾರ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂ ಅನ್ನು ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿತ್ತು.