ಬೆಂಗಳೂರು: ದೇಶದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಜನ ಜೀವನ ಎಂದಿನಂತೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಮುಚ್ಚಿದ್ದ ಶಾಲಾ – ಕಾಲೇಜುಗಳನ್ನು ಮರಳಿ ತೆರೆಯುವ ಚಿಂತನೆ ನಡೆದಿದೆ.

ಶೇ. 30ರಷ್ಟು ಹಾಜರಾತಿಯೊಂದಿಗೆ ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಚಿಂತನೆ ಮಾಡಿದೆ. ಜೊತೆಗೆ ಗ್ರೀನ್, ಆರೇಂಜ್ ಜೋನ್ ಗಳಲ್ಲಿರುವ ಶಾಲೆಗಳ ಆರಂಭ ಮಾಡುವ ಸಾಧ್ಯತೆ ಇದೆ. ಆರಂಭದಲ್ಲಿ ಹೈಸ್ಕೂಲ್ ತರಗತಿಗಳಷ್ಟೇ ಶುರುವಾಗಲಿದ್ದು, ಉಳಿದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ಮುಂದುವರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೇ. 31ರ ನಂತರ ಕೇಂದ್ರ ಸರ್ಕಾರದ ನಿಯಮಗಳನ್ನು ನೋಡಿಕೊಂಡು ಶಾಲೆಗಳ ಪ್ರಾರಂಭದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸದ್ಯಕ್ಕೆ 6 ರಿಂದ 10ನೇ ತರಗತಿಗಳನ್ನು ಪ್ರಾರಂಭಿಸಬಹುದು. ಮಕ್ಕಳ ಹಾಜರಾತಿ ಸಂಖ್ಯೆ ಕಡಿಮೆ ಮಾಡಿ ಶಾಲೆ ಪ್ರಾರಂಭಿಸಬುಹುದು. 3 ದಿನಗಳ ಒಂದು ಬ್ಯಾಚ್ ನಂತೆ ವಿದ್ಯಾರ್ಥಿಗಳ ಬ್ಯಾಚ್ ಮಾಡಬಹುದು.

Leave a Reply

Your email address will not be published. Required fields are marked *

You May Also Like

ಚಂಡಮಾರುತ ಎಲ್ಲಿ ಅಪ್ಪಳಿಸಲಿದೆ ಅಂತ ಹೇಳಿದೆ ಹವಾಮಾನ ಇಲಾಖೆ..!

ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಿಸರ್ಗ ಚಂಡಮಾರುತ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬಾಧಿಸಲಿದೆ. ಈಗಾಗಲೇ ಗುಜಾರಾತ್ ಮತ್ತು ಮಹಾರಾಷ್ಟ್ರದೆಡೆಗೆ ಚಂಡಮಾರುತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗದಗ ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ : ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು?

ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಒಟ್ಟು 10241 ಪ್ರಕರಣಗಳು ಪತ್ತೆಯಾದಂತಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 87677 ಆಗಿದೆ.

ಸುರೇಶ್ ಕುಟುಂಬಕ್ಕೆ ಪರಿಹಾರ, ಪ್ರಕರಣ ಸಿಬಿಐ ತನಿಖೆಗೆ ಒತ್ತಾಯ

ಕಲಬುರಗಿಯಲ್ಲಿ ನಡದ ಘಟನೆಯಲ್ಲಿ ಗೋಂಧಳಿ ಸಮಾಜದ ಸುರೇಶ್ ಎಂಬ ವ್ಯಕ್ತಿ ಕೊಲೆಯಾಗಿದ್ದು, ಸರ್ಕಾರ ತನ ಕುಟುಂಬಕ್ಕೆ 30 ಲಕ್ಷ ಪರಿಹಾರ ಹಾಗು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೋಂಧಳಿ ಸಮಾಜದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಒತ್ತಾಯಿಸಿದರು.

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…