ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ 46 ವರ್ಷದ ಮಹಿಳೆಗೆ ರೂ.5.6 ಲಕ್ಷ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಇಲ್ಲಿಯ ಜಯನಗರದ ಮಹಿಳೆಯೊಬ್ಬರು 2019ರ ಆಗಷ್ಟ್ ನಲ್ಲಿ ಮ್ಯಾಟ್ರಿಮೋನಿ ಸೈಟಿನಲ್ಲಿ ವರನನ್ನು ಹುಡುಕಲು ತಮ್ಮ ಪ್ರೊಫೈಲ್ ಅಪ್ಲೋಡ್ ಮಾಡಿದ್ದರು. ಅದರಲ್ಲಿ ರಿಯನ್ಶ್ ದಿನೇಶ್ ಆಚಾರ್ಯ ಪರಿಚಯವಾಗಿದ್ದಾನೆ. ಜೊತೆಗೆ ಇಂಗ್ಲೆಂಡ್ ಐಎಸ್ಡಿಲ ಕೋಡ್ ಇರುವ ನಂಬರ್ ಅನ್ನು ಕೂಡ ನೀಡಿದ್ದಾನೆ.

ಪ್ರತಿ ದಿನ ಫೋನ್ ಮತ್ತು ಮೆಸೇಜ್ ಮಾಡುತ್ತಿದ್ದ ಆತ, ನಾನು ದೊಡ್ಡ ಶ್ರೀಮಂತನ ಮಗ ಎಂದು ಪರಿಚಯಮಾಡಿಕೊಂಡಿದ್ದ. ನಮ್ಮ ತಂದೆ ಮೂರು ವರ್ಷದ ಹಿಂದೆ ಸಾವನ್ನಪ್ಪಿದ್ದಾರೆ. ಅವರು ಮಲೇಷ್ಯಾದಲ್ಲಿ ವ್ಯಾಪಾರ ಮಾಡುತ್ತಿದ್ದರು. ಈಗ ಅವರ ವ್ಯಾಪಾರವನ್ನು ನಾನು ನೋಡಿಕೊಳ್ಳುತ್ತಿದ್ದೇನೆ. ಆ ಕಾರಣದಿಂದ ನಾನು ಮಲೇಷ್ಯಾಗೆ ಬಂದಿದ್ದೇನೆ ಎಂದು ಹೇಳಿಕೊಂಡಿದ್ದ.

ಇದರ ಜೊತೆಗೆ ನಮ್ಮ ತಂದೆ ಇಲ್ಲಿನ ಕೆಲ ಉದ್ಯೋಗಿಗಳಿಗೆ ಸಾಯುವ ಮುನ್ನ ದೊಡ್ಡ ಮಟ್ಟದ ಹಣ ಕೊಟ್ಟಿದ್ದಾರೆ. ಅದನ್ನು ನಾನು ಮರಳಿ ಪಡೆಯಬೇಕು ಎಂದು ಸುಳ್ಳು ಹೇಳಿದ್ದ. ಸ್ವಲ್ಪ ದಿನಗಳಲ್ಲಿಯೇ ಆ ಹಣವನ್ನು ಪಡೆಯಲು ಶುಲ್ಕ ಕಟ್ಟಬೇಕು ಅದಕ್ಕೆ 6 ಲಕ್ಷ ಹಣ ಬೇಕು ಎಂದು ಮಹಿಳೆಯ ಬಳಿ ಕೇಳಿದ್ದಾನೆ. ಅವನ ಮಾತನ್ನು ನಂಬಿದ ಮಹಿಳೆ ಆನ್ಲೈನ್ ಮೂಲಕ ಸುಮಾರು 5.6 ಲಕ್ಷವನ್ನು ಕಳುಹಿಸಿದ್ದಾರೆ.

ಇದಾದ ಬಳಿಕ ಅವರಿಗೆ ಮೇ 6ರಂದು ಮಲೇಷ್ಯಾದಿಂದ ಅರ್ಚನ ಹೆಸರಿನ ಕಸ್ಟಮ್ ಅಧಿಕಾರಿ ಕಾಲ್ ಮಾಡಿ ನೀವು ಕಳುಹಿಸಿರುವ ಹಣವನ್ನು ಮಲೇಷ್ಯಾದಲ್ಲಿ ರಿಲೀಸ್ ಮಾಡಲು ರೂ. 74 ಸಾವಿರ ಶುಲ್ಕ ಕಟ್ಟಬೇಕು ಎಂದು ಕೇಳಿದ್ದಾರೆ. ಇದರಿಂದ ಅನುಮಾನಗೊಂಡ ಮಹಿಳೆ ನಡೆದ ವಿಚಾರವನ್ನು ಕುಟುಂಬಸ್ಥರ ಬಳಿ ಹಾಗೂ ಸ್ನೇಹಿತರ ಬಳಿ ಹೇಳಿಕೊಂಡಿದ್ದಾರೆ. ಇದರಿಂದಾಗಿ ತಾವು ಮೋಸ ಹೋಗಿದ್ದು ತಿಳಿದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸರ್ಕಾರದ ನಡೆಯಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯ -ಮೋಹನ ದೊಡಕುಂಡಿ

ಉತ್ತರಪ್ರಭ ಸುದ್ದಿಗದಗ: 545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ…

ಜೂ.14ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆ!

ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಶೌರ್ಯ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ: ಸಿಎಂ ಘೋಷಣೆ

vijaya diwas