ಜಿನೆವಾ: ಕೊರೊನಾ ವೈರಸ್ ಗೆ ಪರಿಣಾಮಕಾರಿ ಮದ್ದು ಎನ್ನಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧದ ವೈದ್ಯಕೀಯ ಪ್ರಯೋಗಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಡೆ ನೀಡಿದೆ.

ಹೈಡ್ರಾಕ್ಸಿಕ್ಲೋರೋಕ್ವಿನ್ ಮದ್ದಿನಿಂದಾಗಿ ಕೊರೊನಾ ವೈರಸ್ ರೋಗಿಗಳು ಗುಣಮುಖರಾಗುವುದಕ್ಕಿಂತ ಸಾಯುವ ಅಪಾಯವೇ ಹೆಚ್ಚು ಎಂಬ ವೈದ್ಯಕೀಯ ವರದಿಯ ಹಿನ್ನಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕಾ ಕ್ರಮವಾಗಿ ಈ ತಡೆ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್‌ ಅವರು, ಮುನ್ನೆಚ್ಚರಿಕೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಶ್ವದಾದ್ಯಂತ ಸಾವಿರಾರು ಆಸ್ಪತ್ರೆಗಳು ಕ್ಲಿನಿಕಲ್‌ ಟ್ರಯಲ್‌ಗಾಗಿ ರೋಗಿಗಳನ್ನು ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಗುಂಪಿನ ಸಾಲಿಡಾರಿಟಿ ಟ್ರಯಲ್‌ನಲ್ಲಿ (ಒಗ್ಗಟ್ಟಿನ ಪ್ರಯೋಗ) ನೊಂದಾಯಿಸಿವೆ. ಈ ಕ್ಲಿನಿಕಲ್‌ ಪ್ರಯೋಗದಲ್ಲಿ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್‌ನ ಬಳಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ವಿಶ್ವಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದಿರುವ ಮಾರಕ ಕೊರೊನಾ ವೈರಸ್ ಗೆ ಔಷಧಿ ಕಂಡು ಹಿಡಿಯುವ ಸಲುವಾಗಿ ವಿಶ್ವಾದ್ಯಂತ ನೂರಾರು ಔಷಧ ತಯಾರಿಕಾ ಸಂಸ್ಥೆಗಳು ಸಂಶೋಧನೆಯಲ್ಲಿ ತೊಡಗಿವೆ.

Leave a Reply

Your email address will not be published. Required fields are marked *

You May Also Like

ಸಿ.ಟಿ ರವಿ ಚೀಟಿ ಆಟ: ಕೊನೆಗೂ ಪಾಸಿಟಿವ್ ಅಂತೆ!

ಸಚಿವ ಸಿ.ಟಿ.ರವಿ ಎರಡು ದಿನದಿಂದ ತಮ್ಮ ಕೋರೊನಾ ಪರೀಕ್ಷೆಯ ಕುರಿತು ಟ್ವೀಟ್ ಮಾಡಿದ್ದೇ ಮಾಡಿದ್ದು. ಅವರ ಅನುಭವ ನೋಡಿದರೆ ಟೆಸ್ಟ್ ಫಲಿತಾಂಶ ‘ಪಾಸಿಟಿವ್, ನೆಗೆಟಿವ್’ ಎಂಬ ಎರಡು ಚೀಟಿಯಲ್ಲಿ ಒಂದನ್ನು ಎತ್ತಿಕೊಳ್ಳುವ ಆಟದಂತಿದೆ. ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯೂ ಆಗಿದೆ.

ನೇಪಾಳ ಮತ್ತು ಲಂಕಾದಲ್ಲಿ ಇಂಧನ ಬೆಲೆ ಅಗ್ಗವೇಕೆ: ವಿಶ್ವಂಭರ ಪ್ರಸಾದ್

ಸೀತೆಯ ನೇಪಾಳ ಹಾಗೂ ರಾವಣನ ಲಂಕಾದಲ್ಲಿ ಪೆಟ್ರೋಲ್ ದರ ಏಕೆ ಅಗ್ಗವಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ವಿಶ್ವಂಭರ ಪ್ರಸಾದ್ ನಿಶಾದ್ ಬುಧವಾರ ರಾಜ್ಯಸಭೆಯಲ್ಲಿ ಪ್ರಶ್ನೆ ಮಾಡಿದರು. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಪ್ರಶ್ನಿಸಿದ ವಿಶ್ವಂಭರ ಪ್ರಸಾದ್, ಪೆಟ್ರೋಲ್ ದರವು ಸೀತಾ ಮಾತೆಯ ನೇಪಾಳ ಹಾಗೂ ರಾವಣರ ಲಂಕಾದಲ್ಲಿ ಅಗ್ಗವಾಗಿದೆ. ಹಾಗಿದ್ದರೆ ರಾಮ ಜನ್ಮಭೂಮಿ ಭಾರತದಲ್ಲಿ ಯಾವಾಗ ಕಡಿಮೆ ಮಾಡುತ್ತೀರಿ? ಎಂದು ಕೇಳಿದರು.

ಸಾರ್ವಜನಿಕರಿಂದ ಗೃಹ ಮಂಡಳಿ ಅಧಿಕಾರಿ ತರಾಟೆಗೆ

ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ…

ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ.