ಹಾವೇರಿ: ಜಮೀನು ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೆರಿ ಜಿಲ್ಲೆಯಲ್ಲಿ ನಡೆದಿದೆ. ಮರಿಯಪ್ಪ ಭೂಮಣ್ಣವರ ಕೊಲೆಯಾದ ವ್ಯಕ್ತಿ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ರಾಮಪ್ಪ ನಾಗಪ್ಪ ಭೂಮಳ್ಳೇರ ಎಂಬುವವನಿಂದ ಕೃತ್ಯ ನಡೆದಿದೆ ಎಂದು ಆರೋಪ ಕೇಳಿ ಬಂದಿದೆ. ಜಮೀನು ಒತ್ತುವರಿಯಾಗಿದೆ ಎಂದು ಪಕ್ಕದ ಹೊಲದ ಮಾಲೀಕ ರಾಮಪ್ಪ ಭೂಮಳ್ಳೆರ ಖ್ಯಾತೆ ತೆಗೆದಿದ್ದನೆನ್ನಲಾಗಿದೆ. ಸಂಗಡಿಗರೊಂದಿಗೆ ಸೇರಿ ಮರಿಯಪ್ಪನಿಗೆ ಥಳಿಸಿ ಜಮೀನಿಗೆ ಉಪಯೋಗಿಸುವ ಕೀಟನಾಶಕ ಕುಡಿಸಿ ಕೊಲೆಗೆ ಯತ್ನಿಸಿದ್ದಾರೆ. ಅಸ್ವಸ್ಥನಾಗಿದ್ದ ಮರಿಯಪ್ಪನನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮರಿಯಪ್ಪ ಮೃತಪಟ್ಟಿದ್ದಾರೆ. ಮರಿಯಪ್ಪನ‌ ಕೊಲೆಗಾರರನ್ನು ಕೂಡಲೇ ಬಂಧಿಸುವಂತೆ ಕುಟುಂಬಸ್ಥರ ಆಗ್ರಹಿಸಿದ್ದಾರೆ. ಕೊಲೆಗಾರರನ್ನು ಬಂಧಿಸುವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಕುಟುಂಬಸ್ಥರ ಪಟ್ಟು ಹಿಡಿದರು. ಮೃತದೇಹವನ್ನು ಮನೆಯಲ್ಲಿಟ್ಟು ಕುಟುಂಬಸ್ಥರು ಧರಣಿ ಮಾಡಿದರು. ಈ ಕುರಿತಂತೆ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಮುಂಬೈನ 800 ಚದರ ಅಡಿ ಜಾಗಕ್ಕೆ ತಿಂಗಳಿಗೆ 1 ರೂಪಾಯಿ!: ಪತ್ನಿಗೆ ಲೀಸ್ ಕೊಟ್ಟ ಬ್ಯಾಂಕ್ ಚೇರ್ಮನ್

ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ. ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

ಇನ್ನೇನು ಊರು ತಲುಪಬಹುದು ಎನ್ನುವಷ್ಟರಲ್ಲಿಯೇ 200 ಕಿ.ಮೀ ನಡೆದ ಮಹಿಳೆ ಸಾವು!

ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ.

ಶಿರಹಟ್ಟಿ ಕಟ್ಟಿಗೆ ಅಡ್ಡೆಗಳ ವಿಚಾರದಲ್ಲಿ ಪತ್ರಗಳ ತಾಪತ್ರೆಯ ತಪ್ಪೋದು ಯಾವಾಗ?

ಒಂದು ಮಾದ್ಯಮವಾಗಿ ಉತ್ತರಪ್ರಭ ಜನಪರವಾಗಿ ಕಾರ್ಯ ಮಾಡುತ್ತಿರುವಾಗ ಆಡಳಿತ ಯಂತ್ರಕ್ಕೆ ಮಾತ್ರ ಈ ವಿಚಾರದ ಗಂಭೀರತೆಯ ಅರ್ಥವಾಗುತ್ತಿಲ್ಲವೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಕಾರಣ ಈಗಾಗಲೇ ಶಿರಹಟ್ಟಿ ಪಟ್ಟಣದಲ್ಲಿರುವ ಕಟ್ಟಿಗೆ ಅಡ್ಡೆಗಳ ವಿಚಾರವಾಗಿ ಸೂಕ್ತ ಕ್ರಮಕ್ಕಾಗಿ ಶಿರಹಟ್ಟಿ ತಹಶೀಲ್ದಾರ್ ಸ್ಥಳೀಯ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಆದೇಶಿಸಿದ್ದರು.

ಇನ್ಮೆಲೆ ಹೋಮ್ ಡಿಲೇವರಿ ಮೂಲಕ ಮದ್ಯ ಸಿಗುತ್ತಾ?

ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.