ಬೆಂಗಳೂರು: ಇಂದು ಕೂಡ ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆದಿದೆ. ಈ ಮೂಲಕ ರಾಜ್ಯದಲ್ಲಿ ಇಂದು 100 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 2281 ಒಟ್ಟು ಸೋಂಕಿತ ಪ್ರಕರಣಗಳಲ್ಲಿ 1514 ಕೊರೋನಾ ಸೋಂಕಿತ ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 17 ಕೇಸ್ ಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿವೆ. ಈ ಮೂಲಕ ಈವರೆಗೆ ರಾಜ್ಯದಲ್ಲಿ 722 ಕೇಸ್ ಗುಣಮುಖವಾದಂತಾಗಿದೆ. ಇಂದಿನ ವರದಿ ಪ್ರಕಾರ ಸೋಂಕಿನಿಂದ ರಾಜ್ಯದಲ್ಲಿ ಮೃತಪಟ್ಟಿಲ್ಲ. ಆದರೆ ಈವರೆಗೆ ಒಟ್ಟು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 44 ಇದೆ. ಜೊತೆಗೆ ಕೊವಿಡ್ ಸೋಂಕಿನ ಅನ್ಯ ಕಾರಣದಿಂದ ಮೃತಪಟ್ಟವರ ಸಂಖ್ಯೆ 02 ಇದೆ. ಇಂದಿನ ಸೋಂಕಿತರ ಸಂಕಿ ಸಂಖ್ಯೆಗಳನ್ನು ನೋಡೊದಾಗ ಚಿತ್ರದುರ್ಗ, ಬೀದರ್, ಯಾದಗಿರಿ, ಬೆಳಗಾವಿ, ಹಾಸನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು ಪತ್ತೆ..!

ಕೋಲಾರ – 02

ಯಾದಗಿರಿ – 14

ದಕ್ಷಿಣ ಕನ್ನಡ – 03

ಬಾಗಲಕೋಟೆ -01

ವಿಜಯಪುರ -05

ದಾವಣಗೆರೆ -11

ಬೀದರ್ -10

ಹಾಸನ – 13

ಉಡುಪಿ -03

ಚಿಕ್ಕಬಳ್ಳಾಪುರ -01

ಚಿತ್ರದುರ್ಗ -20

ಕೊಪ್ಪಳ -01

ಬಳ್ಳಾರಿ -01

ಬೆಂಗಳುರು -02

ಬೆಳಗಾವಿ -13

Leave a Reply

Your email address will not be published. Required fields are marked *

You May Also Like

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಾದೇವಪ್ಪ ಬಸಪ್ಪ ಹೆಬ್ಬಾಳ ನಿಧನ

ಆಲಮಟ್ಟಿ:ಬಸವನಬಾಗೇವಾಡಿ ತಾಲ್ಲೂಕಿನ ಮಣ್ಣೂರ ಗ್ರಾಮದ ಲಿಂಗಾಯತ ಸಮಾಜದ ಮುಖಂಡ ಮಹಾದೇವಪ್ಪ ಬಸಪ್ಪ ಹೆಬ್ಬಾಳ (69) ಶುಕ್ರವಾರ…

ನ.30ಕ್ಕೆ ಗಾಣಿಗ ಸಮುದಾಯ ಭವನದ ಲೋಕಾರ್ಪಣೆ

ಹಾತಲಗೇರಿ ನಾಕಾ ಬಳಿ ವಿವೇಕಾನಂದ ನಗರದಲ್ಲಿ ನೂತನವಾಗಿ ನಿರ್ಮಿಸಿದ ಗಾನಿಗ ಸಮಾಜದ ಸಮುದಾಯ ಭವನ ನ.30 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಗಾಣಿಗ ಸಮುದಾಯ ಭವನ ಕಟ್ಟಡ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಹೇಳಿದರು.

ಅಶ್ಲೀಲ ಪೋಟೋ ನೋಡು, ವರದಕ್ಷಿಣೆ ತರುವಂತೆ ಪತಿಯಿಂದ ವೈದ್ಯೆಗೆ ಕಿರುಕುಳ!

ಬೆಂಗಳೂರು : ಪತಿಯು ಅಶ್ಲೀಲ ವಿಡಿಯೋ ನೋಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ದೂರು ದಾಖಲಿಸಿರುವ ಘಟನೆ ನಡೆದಿದೆ.