ಅಸಂಘಟಿತ ಕಾರ್ಮಿಕರಿಗೆ ತಿಂಗಳಿಗೆ ರೂ 10,000 ಪರಿಹಾರಕ್ಕೆ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆ ಅಸಂಘಟಿತ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅವರಿಗೆ ತಿಂಗಳಿಗೆ 10,000 ಪರಿಹಾರ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಕೆಶಿ, ನಾಡಿನ ಸವಿತಾ ಸಮಾಜ, ಕಮ್ಮಾರರು, ಹಮಾಲಿಗಳು, ಚಮ್ಮಾರರು, ಕುಂಬಾರರು, ಮೀನುಹಾರರು, ಬೀಡಿಕಟ್ಟುವವರು, ಬೀದಿಬದಿ ವ್ಯಾಪಾರಿಗಳು,ಅಟೋರಿಕ್ಷಾ ಚಾಲಕರು ಸೇರಿದಂತೆ ಅನೇಕ ವೃತ್ತಿಪರ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ತಿಂಗಳಿಗೆ 10,000 ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

Exit mobile version