ಮಸ್ಕಿ: ಪಟ್ಟಣದ ಬ್ಯಾಂಕಿನ ಉದ್ಯೋಗಿಗೆ ಕೊರೊನಾ ಪಾಸಿಟಿವ್ ದೃಡ ಪಟ್ಟಿರುವ ಹಿನ್ನಲ್ಲೆಯಲ್ಲಿ ಬ್ಯಾಂಕ್ ವನ್ನು ಸಿಲ್ ಡೌನ್ ಮಾಡಲಾಗಿದೆ. ಬ್ಯಾಂಕಿನ ಸಿಬ್ಬಂದಿ ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೆಸರೂ ಗ್ರಾಮದವರು. ಕೊಪ್ಳಳ ಜಿಲ್ಲೆಯಲ್ಲಿ ಕ್ವಾರೆಂಟೈನ್ ಗೆ ಹಾಕಲಾಗಿದ್ದರು, ಅಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿರುವುದರಿಂದ ಕೊರೊನಾ ಪಾಸಿಟಿವ್ ಇರುವುದು ದೃಢ ಪಟ್ಟಿದೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ವಿಷಯ ತಿಳಿದ ತಕ್ಷಣ ಲಿಂಗಸ್ಗೂರಿನ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಅವರು ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಾಯದೊಂದಿಗೆ ಬ್ಯಾಂಕಿಗೆ ಆಗಮಿಸಿ ಬ್ಯಾಂಕ್ ನ್ನು ಸೀಲ್‌ಡೌನ್‌ ಮಾಡಿದರು.
ಬಳಿಕ ರಾಯಚೂರಿನ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ‌ಆಗಮಿಸಿ ಪರಿಶೀಲಿಸಿದರು. ತಾಲೂಕ ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿದರು.‌ ಈ ಸಂದರ್ಭದಲ್ಲಿ ತಹಶೀಲ್ದಾರ್ ಬಲರಾಮ‌ ಕಟ್ಟಿಮನಿ. ಸಿಪಿಐ ದೀಪಕ್‌ ಬೂಸರೆಡ್ಡಿ. ಪಿಎಸ್ಐ ಸಣ್ಣ ಈರೇಶ, ಆರೋಗ್ಯ ಅಧಿಕಾರಿ ನಂದಕುಮಾರ ಸೇರಿದಂತೆ ಇನ್ನಿತರಿದ್ದರು.

Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು 12 ವಾರ್ಡನಲ್ಲ ಬಿಜೆಪಿ

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು…

ಗದಗ ಜಿಲ್ಲೆಯಲ್ಲಿ ಪಾಪುಗಳನ್ನು ಬಿಡದ ಪಾಪಿ ಕೊರೊನಾ..!: ಗದಗ, ನರಗುಂದ, ರೋಣ ತಾಲೂಕಿನಲ್ಲಿ ಸೋಂಕು ದೃಢ

ಗದಗ: ಜಿಲ್ಲೆಯ ನರಗುಂದ ಗಾಡಿ ಓಣಿ ನಿವಾಸಿ 39 ವರ್ಷದ ಪುರುಷ (ಪಿ-15320) ಸೋಂಕಿತರ ಸಂಪರ್ಕದಿಂದಾಗಿ…

ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಕಂಡು ಬಂದ ಸೋಂಕು!

ಬೆಂಗಳೂರು: ಇಲ್ಲಿಯ ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಸೋಂಕು ಇರುವುದು ಬೆಳಕಿಗೆ ಬಂದಿದೆ. ಹೌಸ್ ಕೀಪಿಂಗ್…

ಮಹಿಳೆಯರನ್ನು ರಕ್ಷಿಸಬೇಕಾದ ಪೊಲೀಸನೇ ಇಲ್ಲಿ ಕಿರುಕುಳ ನೀಡಿದ್ದಾನೆ!!

ನವದೆಹಲಿ : ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಬ್ ಇನ್ಸಪೆಕ್ಟರ್ ಒಬ್ಬರನ್ನು ಬಂಧಿಸಿದ್ದಾರೆ.