ಮಸ್ಕಿ: ಪಟ್ಟಣದ ಬ್ಯಾಂಕಿನ ಉದ್ಯೋಗಿಗೆ ಕೊರೊನಾ ಪಾಸಿಟಿವ್ ದೃಡ ಪಟ್ಟಿರುವ ಹಿನ್ನಲ್ಲೆಯಲ್ಲಿ ಬ್ಯಾಂಕ್ ವನ್ನು ಸಿಲ್ ಡೌನ್ ಮಾಡಲಾಗಿದೆ. ಬ್ಯಾಂಕಿನ ಸಿಬ್ಬಂದಿ ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೆಸರೂ ಗ್ರಾಮದವರು. ಕೊಪ್ಳಳ ಜಿಲ್ಲೆಯಲ್ಲಿ ಕ್ವಾರೆಂಟೈನ್ ಗೆ ಹಾಕಲಾಗಿದ್ದರು, ಅಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿರುವುದರಿಂದ ಕೊರೊನಾ ಪಾಸಿಟಿವ್ ಇರುವುದು ದೃಢ ಪಟ್ಟಿದೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ವಿಷಯ ತಿಳಿದ ತಕ್ಷಣ ಲಿಂಗಸ್ಗೂರಿನ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಅವರು ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಾಯದೊಂದಿಗೆ ಬ್ಯಾಂಕಿಗೆ ಆಗಮಿಸಿ ಬ್ಯಾಂಕ್ ನ್ನು ಸೀಲ್ಡೌನ್ ಮಾಡಿದರು.
ಬಳಿಕ ರಾಯಚೂರಿನ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆಆಗಮಿಸಿ ಪರಿಶೀಲಿಸಿದರು. ತಾಲೂಕ ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಬಲರಾಮ ಕಟ್ಟಿಮನಿ. ಸಿಪಿಐ ದೀಪಕ್ ಬೂಸರೆಡ್ಡಿ. ಪಿಎಸ್ಐ ಸಣ್ಣ ಈರೇಶ, ಆರೋಗ್ಯ ಅಧಿಕಾರಿ ನಂದಕುಮಾರ ಸೇರಿದಂತೆ ಇನ್ನಿತರಿದ್ದರು.