ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇಲಾಖೆ ವ್ಯವಸ್ಥಾಪಕ ಜಾಕೀರ್ ಹುಸೇನ್, ಕಂಪ್ಯೂಟರ್ ಆಪರೇಟರ್ ಅಕ್ಬರ್ ಅವರನ್ನು ಎಸಿಬಿ ವಶಕ್ಕೆ ಪಡೆದಿದೆ.
ನಿಗಮದಿಂದ ಮಂಜೂರಾಗಿದ್ದ ಟ್ಯಾಕ್ಸಿಯ ಸಬ್ಸಿಡಿ ಚೆಕ್ ನೀಡಲು 40 ಸಾವಿರ ಲಂಚದ ಬೇಡಿಕೆಯಿಟ್ಟಿದ್ದ ಆರೋಪ ಹಿನ್ನೆಲೆ ಫಲಾನುಭವಿ ಫಾರೂಕ್ ಅವರಿಂದ 40 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಂಪ್ಯೂಟರ್ ಆಪರೇಟರ್ ಅಕ್ಬರ್ ಮೂಲಕ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ.

ಅಂಬ್ಯೂಲೆನ್ಸ್ ನಲ್ಲಿ ಜಿಂಕೆ ಮಾಂಸ ಸಾಗಣೆ..!

ಶಿವಮೊಗ್ಗ: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಸರ್ಕಾರಿ ಕೋವಿಡ್-19 ವಿಶೇಷ ಆಂಬುಲೆನ್ಸ್ ದುರುಪಯೋಗಿಸಿಕೊಂಡು ಜಿಂಕೆ ಮಾಂಸ ಸಾಗಾಟ…

ಖಾಸಗಿ ಅನುದಾನ ರಹಿತ ಶಾಲೆಗಳ ಶುಲ್ಕ ಹೆಚ್ಚಳ ಬೇಡ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ…

ಶಾಸಕರೇ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯನ್ನೊಮ್ಮೆ ನೋಡಿ!

ರೋಗಿಗಳ ಪಾಲಿಗೆ ಆಸ್ಪತ್ರೆಗಳೇ ಸಂಜೀವಿನಿ ಅಂತಾರೆ. ಆದರಲ್ಲೂ ಸರ್ಕಾರಿ ಆಸ್ಪತ್ರೆಗಳಂತೂ ಬಡರೋಗಿಗಳಿಗೆ ಅನುಕೂಲವಾಗಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಸರ್ಕಾರಿ ಆಸ್ಪತ್ರೆ ಗಬ್ಬು ನಾರುತ್ತಿದೆ.