ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇಲಾಖೆ ವ್ಯವಸ್ಥಾಪಕ ಜಾಕೀರ್ ಹುಸೇನ್, ಕಂಪ್ಯೂಟರ್ ಆಪರೇಟರ್ ಅಕ್ಬರ್ ಅವರನ್ನು ಎಸಿಬಿ ವಶಕ್ಕೆ ಪಡೆದಿದೆ.
ನಿಗಮದಿಂದ ಮಂಜೂರಾಗಿದ್ದ ಟ್ಯಾಕ್ಸಿಯ ಸಬ್ಸಿಡಿ ಚೆಕ್ ನೀಡಲು 40 ಸಾವಿರ ಲಂಚದ ಬೇಡಿಕೆಯಿಟ್ಟಿದ್ದ ಆರೋಪ ಹಿನ್ನೆಲೆ ಫಲಾನುಭವಿ ಫಾರೂಕ್ ಅವರಿಂದ 40 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಂಪ್ಯೂಟರ್ ಆಪರೇಟರ್ ಅಕ್ಬರ್ ಮೂಲಕ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ನಿಗದಿತ ದಿನಾಂಕದಂದೇ ನಡೆಯಲಿದೆ ಎಸ್ಎಸ್ಎಲ್ಸಿ ಪರೀಕ್ಷೆ: ಸುಪ್ರೀಂ ಹಸಿರು ನಿಶಾನೆ

ದೆಹಲಿ/ಬೆಂಗಳೂರು: ಜೂ. 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಕೊರೋನಾ…

ಮೌನ್ ಮೋದಿ ಮಿಸ್ಸಿಂಗ್ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್

ದೆಹಲಿ: ಚೀನಾ, ನೇಪಾಳ ಗಡಿಯಲ್ಲಿ ಸಂಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ #MaunModiMissing ಟ್ರೆಂಡಿಂಗ್ ಆಗಿದೆ.…

ಬಳ್ಳಾರಿಯಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಅಮಾನವೀಯ ವರ್ತನೆ: 6 ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ…